Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...