Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...