Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...