Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....