HomeUncategorizedಪೇಜಾವರ ಸ್ವಾಮಿಗಳಂತೆ ಒಣಚರ್ಚೆ ಮಾಡಿ, ತೌಡು ಕುಟ್ಟುವ ಉದ್ದೇಶ ನಮಗಿಲ್ಲ : ಭಾಲ್ಕಿ ಮಠದ ಬಸವಲಿಂಗ...

ಪೇಜಾವರ ಸ್ವಾಮಿಗಳಂತೆ ಒಣಚರ್ಚೆ ಮಾಡಿ, ತೌಡು ಕುಟ್ಟುವ ಉದ್ದೇಶ ನಮಗಿಲ್ಲ : ಭಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಗೆ ಮುಂಚೆ ಬಹುಚರ್ಚಿತವಾದ ಲಿಂಗಾಯಿತ ಧರ್ಮದ ವಿಚಾರವು ಮತ್ತೆ ಮುನ್ನೆಲೆಗೆ ಬಂದಿರುವುದು ಪೇಜಾವರರ ಪಂಥಾಹ್ವಾನದ ಕಾರಣಕ್ಕೆ. ಅದರ ಕುರಿತು ಲಿಂಗಾಯಿತ ಧರ್ಮದ ಚಳವಳಿಯ ಮುಂಚೂಣಿಯಲ್ಲಿದ್ದ ಹಿರಿಯರಾದ ಭಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರನ್ನು ನಾನುಗೌರಿ.ಕಾಂ ಮಾತಾಡಿಸಿತು.

ಪ್ರಶ್ನೆ: ಪೇಜಾವರ ಸ್ವಾಮಿಗಳು ಲಿಂಗಾಯತ ಧರ್ಮದ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಯಾಕಿರಬಹುದು?
ಬಸವಲಿಂಗ ಪಟ್ಟದೇವರು ಸ್ವಾಮೀಜಿ: ಅವರಿಗೆ ಪ್ರತ್ಯೇಕ ಲಿಂಗಾಯತ ಧರ್ಮದ ಆಳವಾದ ತತ್ವಜ್ಞಾನದ ಕೊರತೆಯಿರಬಹದು ಅಥವಾ ತತ್ವಜ್ಞಾನ ಗೊತ್ತಿದ್ದರು ಅದು ಸ್ವತಂತ್ರ ಧರ್ಮ ಆಗಬಾರದೆಂಬ ಅಭಿಲಾಷೆಯೂ ಇರಬಹುದು. ಆದರೆ ಒಂದು ಮಾತ್ರ ಸತ್ಯ. ಲಿಂಗಾಯತ ಧರ್ಮ ಅದು ಸ್ವತಂತ್ರವಾದ ಧರ್ಮ. ಅದರದೇ ಆದ ಒಂದು ಸಿದ್ಧಾಂತ, ಗುರಿ, ಸಾಧನೆ, ದರ್ಶನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ನೀತಿಶಾಸ್ತ್ರ ಇದೆ. ಹೀಗಾಗಿ ಲಿಂಗಾಯತ ಧರ್ಮ ಯಾವತ್ತಿಗೂ ಪರಿಪೂರ್ಣ ಮತ್ತು ಸ್ವತಂತ್ರ ಧರ್ಮ. ಅದರಲ್ಲಿ ಎರಡು ಮಾತಿಲ್ಲ. ಚರ್ಚೆಗೆ ಹೋಗುವ ಪ್ರಶ್ನೆಯೇ ಇಲ್ಲ. ಕೊರತೆಯಿದ್ದರೆ ಮಾತ್ರ ಚರ್ಚೆಗೆ ಹೋಗಬೇಕು. ನಮ್ಮದು ಪ್ರತ್ಯೇಕ ಧರ್ಮ. ಹಿಂದೆಯೂ ಹೀಗೆ ಇತ್ತು. ಮುಂದೆಯೂ ಹೀಗೆಯೇ ಇರುತ್ತದೆ.

ಒಂದು ವಿಷಯ ಸ್ಪಷ್ಟೀಕರಣ ಮಾಡುತ್ತೇನೆ. ಹಿಂದೂ ಎನ್ನುವುದು ಒಂದು ಸಂಸ್ಕೃತಿ. ಯಾವಾಗ ಜೈನರು, ಬುದ್ಧರು, ಸಿಖ್ಖರು ಮುಂತಾದವರು ಹಿಂದೂ ಕಕ್ಷೆಯೊಳಗೆ ಬರುತ್ತಾರೋ ಆಗ ನಾವು ಸಹ ಹಿಂದೂ ಕಕ್ಷೆಯೊಳಗೆ ಬರುತ್ತೀವಿ. ಬೌದ್ಧ ಧರ್ಮ, ಜೈನಧರ್ಮ, ಸಿಖ್ ಧರ್ಮ ಹೆಂಗಿದೆಯೋ ಹಾಗೆಯೇ ಲಿಂಗಾಯತ ಧರ್ಮವೂ ಸ್ವತಂತ್ರ ಧರ್ಮ. ನಮ್ಮ ಸಂಸ್ಕೃತಿ ಬಿಟ್ಟು ಹೋಗುವುದಿಲ್ಲ. ಹಿಂದೂ ಎನ್ನುವುದು ಒಂದು ಸ್ವತಂತ್ರ ಧರ್ಮವಲ್ಲ. ಅದೊಂದು ಸಮಾಜ, ಸಂಸ್ಕೃತಿ.

ಪ್ರಶ್ನೆ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಈ ಚಳವಳಿ ಬಿರುಸಿನಿಂದ ನಡೆದಿತ್ತು. ಆನಂತರ ಇದು ಸ್ತಬ್ಧಗೊಂಡು ನಿಂತಿದೆ ಅನ್ನಿಸುತ್ತಿದೆ. ಹಾಗಾಗಿ ಇದು ರಾಜಕೀಯಪ್ರೇರಿತ ಅಂತ ಏಕೆ ಅನ್ನಿಸಲ್ಲ?
ಇದು ರಾಜಕೀಯ ಪ್ರೇರಿತ ಅಲ್ಲ. ಗಾಂಧೀಜಿಯವರ ಸ್ವತಂತ್ರ ಚಳವಳಿಯೂ ಒಂದೇಸಮನೇ ಎತ್ತರದಲ್ಲಿರಲಿಲ್ಲ. ಚಳವಳಿಗಳು ಯಾವಾಗಲೂ ಏರಿಕೆ ಇಳಿಕೆ, ಏರಿಕೆ ಇಳಿಕೆ ರೀತಿಯಲ್ಲಿಯೇ ಇರುತ್ತವೆ. ಆದರೆ ಚಟುವಟಿಕೆ ಮಾತ್ರ ಪೂರ್ಣ ಸ್ತಬ್ಧಗೊಂಡಿಲ್ಲ. ಸಣ್ಣ ಪ್ರಮಾಣದಲ್ಲಿ ನಮಗೇನು ಬೇಕು ಆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.

ಪ್ರಶ್ನೆ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, 12ನೇ ಶತಮಾನದಲ್ಲಿಯೇ ಅಸ್ತಿತ್ವಕ್ಕೆ ಬಂತು ಎನ್ನುತ್ತೀರಿ, ಹಾಗಾದರೆ ಇದು ಯಾವಾಗ ವೈದಿಕೀಕರಣಗೊಂಡಿತು?
ಕಲ್ಯಾಣಕ್ರಾಂತಿ ಆದಮೇಲೆ ಇದಕ್ಕೆ ಸ್ವಲ್ಪ ಕತ್ತಲು ಆವರಿಸಿತು. ಬಸವಣ್ಣನವರ ಕ್ರಾಂತಿ, ಅಂತರ್ಜಾತಿವಿವಾಹ ಆದಮೇಲೆ ವೈದಿಕಶಾಹಿ ಮತ್ತು ರಾಜಶಾಹಿ ಎರಡು ಒಂದಾಗಿ ಇದರ ಮೇಲೆ ಆಕ್ರಮಣ ನಡೆಸಿದರಿಂದ 200-300 ವರ್ಷ ಅದು ಕತ್ತಲೆಯಲ್ಲಿಳಿಯಿತು. ಆನಂತರ ನಿಧಾನವಾಗಿ ವೈದಿಕೀಕರಣಗೊಳ್ಳಲಿಕ್ಕೆ ಪ್ರಾರಂಭವಾಯಿತು.

ಆಮೇಲೆ ವಿಜಯನಗರ ಸಾಮ್ರಾಜ್ಯದ ಸಮಯದಲ್ಲಿ ಪ್ರೌಢದೇವರಾಯನ ಕಾಲಕ್ಕೆ ಮತ್ತದು ಸ್ವಲ್ಪ ಚೇತರಿಕೆ ಕಂಡು ನೂರೊಂದು ವಿರಕ್ತರು, ಯಡಿಯೂರು ಸಿದ್ಧಲಿಂಗೇಶ್ವರರ ಕಾಲಕ್ಕೆ ಇದು ಪುನರುಜ್ಜೀವನಗೊಂಡಿತು. ಮತ್ತೆ ಸ್ವಲ್ಪ 100 ವರ್ಷ ಇಳಿಮುಖವಾಯಿತು. ನಂತರ ಹಳಕಟ್ಟಿ ಶರಣರು ಬಂದಮೇಲೆ, ವಚನಸಾಹಿತ್ಯ ಎಲ್ಲಾ ಹೊರಗೆ ತಂದಮೇಲೆ ಇದು ನಮ್ಮತನ ಏನು ಎಂಬುದು ನಮಗೆ ಗೊತ್ತಾಯಿತು. ವಚನಸಾಹಿತ್ಯವೇ ನಮಗೆ ಮಹತ್ವ. ಅದನ್ನು ಅಧ್ಯಯನ ಮಾಡುತ್ತಾ ಹೋದಂಗೆ ನಾವು ನಿಜವಾಗಿ ಯಾರು ಎಂಬುದು ತಿಳಿಯಿತು.

ಪ್ರಶ್ನೆ: ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಕೇವಲ ಮೀಸಲಾತಿಗಾಗಿಯೋ ಅಥವಾ ಮೂಲ ಅಸ್ಮಿತೆಗಾಗಿಯೋ?
ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿಯೇ ಈ ಹೋರಾಟ. ಇದೇ ನಮ್ಮ ಗಟ್ಟಿ ನಿಲುವು. ಮೀಸಲಾತಿದು ಎರಡನೇ ಪ್ರಶ್ನೆ. ಧರ್ಮಕ್ಕೆ ಮಾನ್ಯತೆ ಸಿಕ್ಕಿದ ಮೇಲೆ ಮೀಸಲಾತಿ ಸಿಗಬಹುದು, ಬಿಡಬಹುದು. ಆ ಪ್ರಶ್ನೆ ಬೇರೆ. ಆದರೆ ನಮಗೆ ಮಾನ್ಯತೆಯೇ ಮಹತ್ವದ್ದು.

ಪ್ರಶ್ನೆ: ಲಿಂಗಾಯತ ಧರ್ಮದ ಹೋರಾಟದ ನೇತೃತ್ವ ರಾಜಕಾರಣಿಗಳ ಕೈಯಲ್ಲಿರಬೇಕೊ ಅಥವಾ ಸ್ವಾಮಿಜೀಗಳ ಕೈಯಲ್ಲಿರಬೇಕೊ? ಅಥವಾ ಮಾಸ್ ಚಳವಳಿಯಾಗಿ ಜನಸಾಮಾನ್ಯರ ಕೈಯಲ್ಲಿರಬೇಕೊ?

ಹೋರಾಟಕ್ಕೆ ಎಲ್ಲರೂ ಬೇಕು. ಇವರೇ ಬೇಕು ಅವರಿರಬಾರದು ಎಂಬ ಪ್ರಶ್ನೆಯೇ ಹೋರಾಟದಲ್ಲಿ ಉದ್ಭವಿಸುವುದಿಲ್ಲ. ಹೋರಾಟದಾಗೆ ಎಲ್ಲರೂ ಇದ್ರೆ ಶಕ್ತಿ ಇರುತ್ತದೆ. ರಥ ಎಳೆಯಬೇಕಾದರೆ ಎಲ್ಲರ ಕೈಗೂಡಬೇಕು. ಒಬ್ಬರೇ ರಥ ಎಳೆಯಲಾಗುವುದಿಲ್ಲ.

ಪ್ರಶ್ನೆ: ಲಿಂಗಾಯತ ಚಳವಳಿಯು ಮಂಟೇಸ್ವಾಮಿ, ಮಲೆ ಮಹದೇಶ್ವರ ಪರಂಪರೆಯನ್ನು ಹೇಗೆ ನೋಡುತ್ತದೆ? ಆ ಪರಂಪರೆ ಯಾಕೆ ಮುನ್ನೆಲೆಗೆ ಬರಲಿಲ್ಲ?
ಮೈಸೂರು ಭಾಗದಲ್ಲಿ ಅವರ ಕೊಡುಗೆ ಮಹತ್ವದ್ದು. ಆ ಭಾಗದಲ್ಲಿ ಬಸವ ತತ್ವ, ಲಿಂಗತತ್ವ ಉಳಿದು ಬೆಳೆಯಲ್ಲಿಕ್ಕೆ ಅವರ ಅಪಾರ ಕೊಡುಗೆ ಇದೆ. ಮಂಟೇಸ್ವಾಮಿ, ಮಲೆ ಮಹದೇಶ್ವರರು ಸಹ ಶರಣ ಪರಂಪರೆಯವರೆ ಅಲ್ಲವೇ? ಆದರೆ ಅದನ್ನು ಪೌರಾಣೀಕರಿಸಲಾಗಿದೆ. ಈ ಭಾಗದಲ್ಲಿ ಷಣ್ಮುಗ ಶಿವಯೋಗಿಗಳು ಬಂದು ಈ ಸುತ್ತಾಮುತ್ತಾ ಜಾಗೃತಿ ಹೇಗೆ ಮಾಡಿದರೋ ಹಾಗೆಯೇ ಮೈಸೂರು ಭಾಗಕ್ಕೆ ಅವರು ಜಾಗೃತಿ ಮಾಡಿದ್ದಾರೆ. ಅವರು ಶರಣ ಪರಂಪರೆಯ ಭಾಗವೇ ಹೊರತು ಬೇರೆ ಅಲ್ಲ.

ಪ್ರಶ್ನೆ: ಲಿಂಗಾಯತ ತತ್ವ. ಜೀವಪರ ಮತ್ತು ಜನಪರ ತತ್ವ. ಎಲ್ಲರನ್ನು ಒಳಗೊಳ್ಳುತ್ತದೆ. ಮೌಢ್ಯಾಚರಣೆಯ ಬಗ್ಗೆಯೂ, ಜಾತ್ಯತೀತತೆಯ ಬಗ್ಗೆಯೂ ಮಾತಾಡುತ್ತೀರಿ. ಆದರೆ ಇದು ಬೋಧನೆ ಮಟ್ಟದಲ್ಲಿ ಜಾಸ್ತಿಯಿದ್ದು ಆಚರಣೆಯಲ್ಲಿ ಕಡಿಮೆ ಇದೆ ಎಂದು ನಿಮಗೆ ಅನ್ನಿಸುವುದಿಲ್ಲವೇ?
ತತ್ವ ತಿಳಿದವರು ಆಚರಣೆಯಲ್ಲಿ ನಿಧಾನ ಮಾಡುತ್ತಿದ್ದಾರೆ ನಿಜ. ಒಂದೇದಿನ ಒಂದೇ ಸಮಯದಲ್ಲಿ ಬದಲಾವಣೆಯಾಗುವುದಿಲ್ಲ. ಮೊದಲು ಜಾಗೃತಿ ಬೇಕು. ಒಂದೇ ದಿನದಲ್ಲಿ ಶರಣ ತತ್ವ ಆಚರಣೆಗೆ ಬರಲು ಸಾಧ್ಯವಿಲ್ಲ. ಕ್ರಮವಾಗಿ ನಡೆದು ಬಸವತತ್ವ ಪಾಲಕರು ಆಗುತ್ತಾರೆ.

ಪ್ರಶ್ನೆ: ಮುಂದಿನ ಹೋರಾಟದ ರೂಪುರೇಷೆಯೇನು?
ಮೊದಲು ಜಾಗೃತಿ ಮಾಡುವುದು. ಅಲ್ಲಲ್ಲಿ ಸಮಾವೇಶ ನಡೆಸುವುದು ಸಮಾವೇಶದ ಗುರಿಯಾಗಿದೆ. ಪೇಜಾವರ ಸ್ವಾಮಿಗಳಂತೆ ಒಣಚರ್ಚೆ ಮಾಡಿ ತೌಡು ಕುಟ್ಟುವ ಉದ್ದೇಶ ನಮಗಿಲ್ಲ. ನಮ್ಮ ತತ್ವ ಸಿದ್ದಾಂತ ಇದೆ. ಅದರ ಪ್ರಕಾರ ನಾವು ಹೋಗುತ್ತೇವೆ.

ಪ್ರಶ್ನೆ: 99 ಪಂಗಡಗಳು ನಿಮ್ಮ ಜೊತೆಗಿದ್ದಾವೆಯೇ?
ಎಲ್ಲರೂ ಜೊತೆಗಿದ್ದಾರೆ. ಹಡಪದ ಅಪ್ಪಣ್ಣ, ಮಾದಾರ ಚನ್ನಯ್ಯ, ಡೋಹಾರ ಕಕ್ಕಯ್ಯ ಎಲ್ಲರೂ ನಮ್ಮ ಜೊತೆಗಿದ್ದಾರೆ.

ಸಂದರ್ಶನ: ಸಿದ್ದಪ್ಪ ಮೂಲಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...