Homeಮುಖಪುಟಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು

ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು

ಹಂಸಲೇಖರವರು ಒಂದು ಗಂಟೆಗಳ ಕಾಲ ಬಹಳ ಖುಷಿ ಮತ್ತು ಉತ್ಸಾಹದಿಂದ ಎಸಿಪಿ, ಡಿಸಿಪಿ, ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳ ಜೊತೆ ಅವರ ಹಳೆಯ ಸಿನಿಮಾಗಳು ಮತ್ತು ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡಿದರು.

- Advertisement -
- Advertisement -

ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣದ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಗುರವಾರದಂದು ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಬಸವನಗುಡಿ ಠಾಣೆಗೆ ಹಾಜರಾದ ಸಂದರ್ಭದಲ್ಲಿ ಹಂಸಲೇಖರವರು ಉತ್ಸಾಹದಿಂದಿದ್ದರು. ಒಂದು ಗಂಟೆಗಳ ಕಾಲ ಬಹಳ ಖುಷಿ ಮತ್ತು ಉತ್ಸಾಹದಿಂದ ಎಸಿಪಿ, ಡಿಸಿಪಿ, ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳ ಜೊತೆ ಅವರ ಹಳೆಯ ಸಿನಿಮಾಗಳು ಮತ್ತು ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡಿದರು.

ಪೊಲೀಸ್ ಸಿಬ್ಬಂದಿಗಳು ಹಂಸಲೇಖರವರಿಗೆ ಚಹಾ ಮತ್ತು ಬಿಸ್ಕೆಟ್ ಕೊಟ್ಟು ಸತ್ಕರಿಸಿದರು. ಹೇಳಿಕೆ ನೀಡಿ ಮುಗಿಸಿ ಕೊನೆಗೆ ತೆರಳುವ ಸಂದರ್ಭದಲ್ಲಿ ಎಸಿಪಿ, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಬಹುತೇಕ ಸಿಬ್ಬಂದಿಗಳು ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡು ಗೌರವಯುತವಾಗಿ ಕಳಿಸಿಕೊಟ್ಟರು ಎಂದು ನಮ್ಮ ಮೂಲಗಳು ತಿಳಿಸಿವೆ. ಈ ವೇಳೆ ಹಂಸಲೇಖರವರ ಅಪಾರ ಅಭಿಮಾನಿಗಳು ಠಾಣೆ ಎದುರು ಜಮಾಯಿಸಿದ್ದರು.

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ಪ್ರಾರಂಭವಾಗಿದೆ. ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿದ್ದು, ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯುತ್ತಿದೆ.

ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಹೊರಟ ರ್‍ಯಾಲಿಯು ಫ್ರೀಡಂ ಪಾರ್ಕಿನವರೆಗೆ ಸಾಗಲಿದ್ದು, ಅಲ್ಲಿ ಪ್ರತಿಭಟನಾಕಾರರು ತಮ್ಮೊಂದಿಗೆ ತಂದಿರುವ ಬಾಡೂಟದ ಬುತ್ತಿಯನ್ನು ತೆರೆದು ಊಟ ಮಾಡುತ್ತಿದ್ದಾರೆ.

ವಿಡಿಯೋ ನೋಡಿ


ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ‘ಜನದನಿ’ ಸ್ವಾಗತಾರ್ಹ. ಮನುವಾದಿಗಳ ಕುತಂತ್ರದ ವಿರುದ್ಧ ಆಗಾಗ್ಗೆ ಇಂತಹ ಪ್ರತಿಭಟನೆಗಳು ನಡೆಯುತ್ತಿರಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....