Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...