Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...