Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...