Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...