Homeಕರ್ನಾಟಕರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

- Advertisement -
- Advertisement -

ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೇ ಲಿಂಗಾಯತ ಶಾಸಕರನ್ನೇ ಬಿಜೆಪಿ ಆಯ್ಕೆ ಮಾಡಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪ್ರಸ್ತುತ ರಾಜ್ಯ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಮತ್ತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರುಗಳು ಮುಂಚೂಣಿಗೆ ಬಂದಿದೆ. ಇಬ್ಬರು ಕೂಡಾ ಲಿಂಗಾಯತ ಸಮುದಾಯದ ವ್ಯಕ್ತಿಗಳಾಗಿರುವುದರಿಂದ ಎಲ್ಲರ ದೃಷ್ಟಿ ಸಂಜೆ ಏಳು ಗಂಟೆಯ ನಂತರ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಯತ್ತ ನೆಟ್ಟಿದೆ.

ಈಗಾಗಲೇ ಬಿಜೆಪಿಯ ಕೇಂದ್ರ ನಾಯಕತ್ವದ ಕಡೆಯ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ ಬೆಂಗಳೂರು ತಲುಪಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‌ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಇದರ ನಂತರ ಬಸವರಾಜ್ ಬೊಮ್ಮಾಯಿ ಅವರು ಕೂಡಾ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ…ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

ಮುಖ್ಯಮಂತ್ರಿ ರೇಸ್‌ನಲ್ಲಿ ಅರವಿಂದ ಬೆಲ್ಲದ್ ಅವರ ಹೆಸರು ಇದ್ದರೂ, ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಮುಖ್ಯಮಂತ್ರಿಯನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಲಿದ್ದಾರೆ ಎಂದು ಕೂಡಾ ಹೇಳಲಾಗಿದೆ.

ಲಿಂಗಾಯತ ಶಾಸಕರಲ್ಲೇ ಹೆಚ್ಚು ಪ್ರಭಾವಶಾಲಿಯಾಗಿರುವ, ಪ್ರಸ್ತುತ ಕರ್ನಾಟಕ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಬಸವರಾಜ್ ಬೊಮ್ಮಾಯಿ ಯಾರು?

ಜನವರಿ 28, 1960 ರಂದು ಜನಿಸಿದ ಬಸವರಾಜ್ ಬೊಮ್ಮಾಯಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅವರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದು, ‘ಜನತಾ ಪರಿವಾರ’ ಮೂಲದವರಾಗಿದ್ದಾರೆ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಬಸವರಾಜ್ ಬೊಮ್ಮಾಯಿ 2008 ರಲ್ಲಿ ಬಿಜೆಪಿಗೆ ಸೇರಿದ್ದ ಅವರು, ಅಂದಿನಿಂದ ಪಕ್ಷದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತಲೆ ಬಂದಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅವರು ಟಾಟಾ ಸಮೂಹದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಿಂದ ಎರಡು ಬಾರಿ ಎಂಎಲ್‌ಸಿ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನು ಬದಲಿಸುವ ಔಪಚಾರಿಕ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಜೆಪಿ ಇಂದು ಸಂಜೆ 7 ಗಂಟೆಗೆ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಪಕ್ಷದ ಕೇಂದ್ರ ನಾಯಕತ್ವವು ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ರಾಜ್ಯ ಘಟಕಕ್ಕೆ ನಿರ್ದೇಶನ ನೀಡಿದೆ.

“ಇಂದು ಸಂಜೆ 7 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಇದರ ನಂತರ ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಲ್ಲಿ ಹೊಸ ಮುಖ್ಯಮಂತ್ರಿ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಬಸವರಾಜ್ ಬೊಮ್ಮಾಯಿ ಖಾಸಗಿ ವಾಹಿನಿಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...