Homeಕರ್ನಾಟಕರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

- Advertisement -
- Advertisement -

ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೇ ಲಿಂಗಾಯತ ಶಾಸಕರನ್ನೇ ಬಿಜೆಪಿ ಆಯ್ಕೆ ಮಾಡಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪ್ರಸ್ತುತ ರಾಜ್ಯ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಮತ್ತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರುಗಳು ಮುಂಚೂಣಿಗೆ ಬಂದಿದೆ. ಇಬ್ಬರು ಕೂಡಾ ಲಿಂಗಾಯತ ಸಮುದಾಯದ ವ್ಯಕ್ತಿಗಳಾಗಿರುವುದರಿಂದ ಎಲ್ಲರ ದೃಷ್ಟಿ ಸಂಜೆ ಏಳು ಗಂಟೆಯ ನಂತರ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಯತ್ತ ನೆಟ್ಟಿದೆ.

ಈಗಾಗಲೇ ಬಿಜೆಪಿಯ ಕೇಂದ್ರ ನಾಯಕತ್ವದ ಕಡೆಯ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ ಬೆಂಗಳೂರು ತಲುಪಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‌ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಇದರ ನಂತರ ಬಸವರಾಜ್ ಬೊಮ್ಮಾಯಿ ಅವರು ಕೂಡಾ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ…ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

ಮುಖ್ಯಮಂತ್ರಿ ರೇಸ್‌ನಲ್ಲಿ ಅರವಿಂದ ಬೆಲ್ಲದ್ ಅವರ ಹೆಸರು ಇದ್ದರೂ, ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಮುಖ್ಯಮಂತ್ರಿಯನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಲಿದ್ದಾರೆ ಎಂದು ಕೂಡಾ ಹೇಳಲಾಗಿದೆ.

ಲಿಂಗಾಯತ ಶಾಸಕರಲ್ಲೇ ಹೆಚ್ಚು ಪ್ರಭಾವಶಾಲಿಯಾಗಿರುವ, ಪ್ರಸ್ತುತ ಕರ್ನಾಟಕ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಬಸವರಾಜ್ ಬೊಮ್ಮಾಯಿ ಯಾರು?

ಜನವರಿ 28, 1960 ರಂದು ಜನಿಸಿದ ಬಸವರಾಜ್ ಬೊಮ್ಮಾಯಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅವರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದು, ‘ಜನತಾ ಪರಿವಾರ’ ಮೂಲದವರಾಗಿದ್ದಾರೆ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಬಸವರಾಜ್ ಬೊಮ್ಮಾಯಿ 2008 ರಲ್ಲಿ ಬಿಜೆಪಿಗೆ ಸೇರಿದ್ದ ಅವರು, ಅಂದಿನಿಂದ ಪಕ್ಷದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತಲೆ ಬಂದಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅವರು ಟಾಟಾ ಸಮೂಹದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಿಂದ ಎರಡು ಬಾರಿ ಎಂಎಲ್‌ಸಿ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನು ಬದಲಿಸುವ ಔಪಚಾರಿಕ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಜೆಪಿ ಇಂದು ಸಂಜೆ 7 ಗಂಟೆಗೆ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಪಕ್ಷದ ಕೇಂದ್ರ ನಾಯಕತ್ವವು ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ರಾಜ್ಯ ಘಟಕಕ್ಕೆ ನಿರ್ದೇಶನ ನೀಡಿದೆ.

“ಇಂದು ಸಂಜೆ 7 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಇದರ ನಂತರ ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಲ್ಲಿ ಹೊಸ ಮುಖ್ಯಮಂತ್ರಿ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಬಸವರಾಜ್ ಬೊಮ್ಮಾಯಿ ಖಾಸಗಿ ವಾಹಿನಿಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...