Homeಕರ್ನಾಟಕರೈತ ಹೋರಾಟದ ಕುರಿತ 'ಹೊನ್ನಾರು ಒಕ್ಕಲು', ‘ಕದನ ಕಣ’ ಪುಸ್ತಕಗಳ ಬಿಡುಗಡೆ

ರೈತ ಹೋರಾಟದ ಕುರಿತ ‘ಹೊನ್ನಾರು ಒಕ್ಕಲು’, ‘ಕದನ ಕಣ’ ಪುಸ್ತಕಗಳ ಬಿಡುಗಡೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 87 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ರೈತ ಹೋರಾಟವನ್ನು ಕೋಟ್ಯಂತರ ಜನರು ತಮ್ಮದೇ ಆದ ರೀತಿಯಲ್ಲಿ ಬೆಂಬಲಿಸುತ್ತಿದ್ದಾರೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಐತಿಹಾಸಿಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಸೃಜನಶೀಲ ಕೆಲಸಗಳು ಹೊರಬರುತ್ತಿವೆ. ಇದರ ಭಾಗವಾಗಿ ರೈತ ಹೋರಾಟದ ಸುತ್ತಲಿನ ವಿದ್ಯಮಾನಗಳ ಕುರಿತ 2 ಪುಸ್ತಕಗಳು ಫೆ. 20 ರಂದು ಬಿಡುಗಡೆಯಾಗುತ್ತಿದೆ.

ರೈತ ಚಳುವಳಿಯ ಕುರಿತು ಎರಡು ಪುಸ್ತಕಗಳ ಬಿಡುಗಡೆ ಮತ್ತು “ದೆಹಲಿ ಗಡಿಯ ರೈತರೊಂದಿಗೆ ಕನ್ನಡ ಮನಸ್ಸುಗಳು” ಕುರಿತು ‘ಪುಸ್ತಕ ಪ್ರೀತಿ ತಿಂಗಳ ಮಾತುಕತೆ’ ಕಾರ್ಯಕ್ರಮವು ಫೆ. 20 ರಂದು ನಡೆಯಲಿದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ದೇಶದಲ್ಲಿ ಜನತಾಂತ್ರಿಕ ನೆಲೆಗಳು ದುರ್ಬಲಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಹೋರಾಟ ನಡೆಸಿರುವ ಅನ್ನದಾತರು ಪ್ರಜಾಪ್ರಭುತ್ವದ ಎಳೆಗಳನ್ನು ಗಟ್ಟಿಗೊಳಿಸುವ ಮಹತ್ವದ ಚಳುವಳಿಯನ್ನು ರೂಪಿಸುತ್ತಿದ್ದಾರೆ. ಇದನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಕಳೆದ ಎರಡೂವರೆ ತಿಂಗಳಿಂದಲೂ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ದಿಶಾ ಬಂಧನ ಕಾನೂನುಪಾಲನೆಯ ಲೋಪದೋಷ ಅಷ್ಟೇ ಅಲ್ಲ; ಪ್ರಜಾಪ್ರಭುತ್ವದ ಅಣಕು ಕೂಡ

ಸರ್ಕಾರವನ್ನೇ ಬೆಚ್ಚಿ ಬೀಳಿಸುವಂತಹ ಮಟ್ಟದಲ್ಲಿ ರೈತರಿಗೆ ಬೆಂಬಲ ವ್ಯಕ್ತವಾಗಿದೆ. 2021ರ ಗಣರಾಜ್ಯೋತ್ಸವ ‘ರೈತಗಣರಾಜ್ಯೋತ್ಸವ’ವಾಗಿ ಮಾರ್ಪಟ್ಟಿತು. ಇದೇ ಸಂದರ್ಭದಲ್ಲಿ ಬರಹಗಾರರು, ಕಲಾವಿದರು, ಸಾಹಿತಿಗಳು ತಮ್ಮ ಕಾಳಜಿಯನ್ನು ಬರಹದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ವಿಶ್ವದೆಲ್ಲೆಡೆಗಳಿಂದ ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆಯುತ್ತಿವೆ. ರೈತರ ಕುರಿತು ಸಾವಿರಾರು ಬರಹಗಾರರು ಕವಿತೆ, ಕತೆ, ಲೇಖನ, ಹಾಡು, ನಾಟಕಗಳ ಮೂಲಕ ಸ್ಪಂದಿಸುತ್ತಿದ್ದಾರೆ.

‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು)

ಈ ಹೋರಾಟಕ್ಕೆ ಸ್ಪಂದಿಸಿದ ಕನ್ನಡದ ಕವಿಗಳಿಂದ ರೈತರ ಆಂದೋಲನ ಕುರಿತ ಕವನಗಳನ್ನು ತರಿಸಿ, ‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು) ಎಂಬ ಹೆಸರಿನ ಕವನ ಸಂಕಲನವನ್ನು ರೂಪಿಸಲಾಗಿದೆ. 64 ಹಿರಿಯ ಕಿರಿಯ ಕವಿಗಳ ಕವಿತೆಗಳು ಇಲ್ಲಿವೆ. ಈ ಸಂಕಲನವನ್ನು ಡಾ. ಕೆ ಷರೀಫಾ ಮತ್ತು ಯಮುನಾ ಗಾಂವ್ಕರ್ ಸಂಪಾದಿಸಿದ್ದಾರೆ. ಈ ಸಂಕಲನದಲ್ಲಿ ರೈತ ಚಳುವಳಿಗೆ ಬೆಂಬಲವಾಗಿ ಕಲಾವಿದರು ಬರೆದ ಕಲಾತ್ಮಕ ಪೋಸ್ಟರುಗಳು, ಕಲಾಕೃತಿಗಳ ಚಿತ್ರಗಳನ್ನು ಕವಿತೆಗಳ ಜತೆ ಕೊಡಲಾಗಿದೆ.

‘ಕದನ ಕಣ’

ರೈತ ಚಳುವಳಿ ತೀವ್ರವಾಗುತ್ತಿದ್ದಾಗ ಜನವರಿಯ ಎರಡನೇ ವಾರದಲ್ಲಿ ದೆಹಲಿ ರೈತರ ಚಳುವಳಿಗೆ ಕರ್ನಾಟಕ ರೈತರ ಸೌಹಾರ್ದ ಬೆಂಬಲ ಕೊಡಲು ಮತ್ತು ಆ ಚಾರಿತ್ರಿಕ ಚಳುವಳಿಯ ಪ್ರತ್ಯಕ್ಷ ಅನುಭವ ಪಡೆಯಲು ಕರ್ನಾಟಕ ಪ್ರಾಂತ ರೈತ ಸಂಘ ಅದರ ರಾಜ್ಯ ನಾಯಕರುಗಳಾದ ಎಚ್.ಆರ್. ನವೀನ್ ಕುಮಾರ್ ಮತ್ತು ಜಗದೀಶ ಸೂರ್ಯ ಅವರನ್ನು ದೆಹಲಿಗೆ ಕಳಿಸಿತು. ಅವರು 10 ದಿನಗಳ ಪ್ರವಾಸದ ಅವಧಿಯಲ್ಲಿ ತಮ್ಮ ಶ್ರೀಮಂತ ಅನುಭವವನ್ನು ಬರಹ, ಫೊಟೊ, ಲೈವ್ ವಿಡಿಯೊ ಗಳ ಮೂಲಕ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ದೆಹಲಿಯ ರೈತ ಹೋರಾಟವನ್ನು ಜಾಣ ಮೌನ, ಸುಳ್ಳು ಸುದ್ದಿ, ಪೊಳ್ಳು ಆಪಾದನೆಗಳ ಮೂಲಕ ನಿರ್ಲಕ್ಷ, ಅವಹೇಳನಕ್ಕೆ ಗುರಿ ಮಾಡಿರುವ “ಗೋದಿ ಮೀಡಿಯಾ”ದ ಅಸಹ್ಯ ವರ್ತನೆಯ ಸಂದರ್ಭದಲ್ಲಿ ಇವು ಬಹಳ ಜನಪ್ರಿಯವಾದವು. ಈ ಚಾರಿತ್ರಿಕ ಚಳುವಳಿಯ ಅಮೂಲ್ಯ ಅನುಭವಗಳ ಕುರಿತ ಚಾರಿತ್ರಿಕ ಬರಹಗಳನ್ನು ಫೊಟೊಗಳನ್ನು ಇನ್ನಷ್ಟು ಸೇರಿಸಿ, ಪರಿಷ್ಕರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಬೇಕು ಎಂಬ ಒತ್ತಾಯದ ಮೇರೆಗೆ ಸ್ವತಃ ಉತ್ತಮ ಪತ್ರಕರ್ತ, ಫೊಟೊಗ್ರಾಫರ್ ಆಗಿರುವ ಎಚ್.ಆರ್. ನವೀನ್ ಕುಮಾರ್ ಅದನ್ನು ಪುಸ್ತಕದ ರೂಪದಲ್ಲಿ ಬರೆದಿದ್ದಾರೆ. ಅದರಲ್ಲಿ ತಾವೇ ತೆಗೆದ ಉತ್ತಮ ಪೋಟೊಗಳನ್ನು ಸೇರಿಸಿದ್ದಾರೆ. ಇದಕ್ಕೆ ‘ಕದನ ಕಣ’ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಈ ಎರಡೂ ಪುಸ್ತಕಗಳನ್ನು ಕ್ರಿಯಾ ಮಾಧ್ಯಮ ಪ್ರಕಟಿಸುತ್ತಿದ್ದು, ಇವುಗಳೆರಡಕ್ಕೂ ದೆಹಲಿಯಲ್ಲಿ ವಾಸವಿದ್ದು ರೈತರ ಚಳುವಳಿಯ ನೇರ ಸಂಪರ್ಕ ಇಟ್ಟುಕೊಂಡಿರುವ ಅದರ ಆಳವಾದ ತಿಳುವಳಿಕೆ ಇರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಮುನ್ನುಡಿ ಬರೆದು ಬೆನ್ನು ತಟ್ಟಿದ್ದಾರೆ. ದೆಹಲಿ ರೈತರ ಚಳುವಳಿಯ ಕುರಿತಾದ ‘ಹೊನ್ನಾರು ಒಕ್ಕಲು’ ಮತ್ತು ‘ಕದನ ಕಣ’ ಎಂಬ ಈ ಎರಡು ಪುಸ್ತಕಗಳನ್ನು ಫೆಬ್ರುವರಿ 20ರಂದು ನಡೆಯುವ ಆನ್ ಲೈನ್ ಸಭೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ.

ದೆಹಲಿಗೆ ಎರಡು ಬಾರಿ ಭೇಟಿಯಿತ್ತು ದೆಹಲಿ ರೈತರ ಚಳುವಳಿಯ ಕುರಿತು ಸಾಕ್ಷ್ಯ ಚಿತ್ರ ತಯಾರಿಸುತ್ತಿರುವ ಕೇಸರಿ ಹರವು, ಚಳುವಳಿಯ ನಾಯಕತ್ವ ವಹಿಸುತ್ತಿರುವ ರೈತ ಸಂಘಟನೆಗಳಲ್ಲಿ ಒಂದಾದ ಅಖಿಲ ಭಾರತ ಕಿಸಾನ ಸಭಾದ ಜಂಟಿ ಕಾರ್ಯದರ್ಶಿ ವಿಜೂ ಕೃಷ್ಣನ್ ಮತ್ತು ಡಾ. ಪುರುಷೋತ್ತಮ ಬಿಳಿಮಲೆ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡೂ ಪುಸ್ತಕಗಳ ಲೇಖಕರು, ಕವಿಗಳು, ಸಂಪಾದಕರು ಭಾಗವಹಿಸಲಿದ್ದಾರೆ ಎಂದು ಕ್ರಿಯಾ ಮಾಧ್ಯಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವು ಆನ್‌ಲೈನ್‌ನಲ್ಲಿ ನಡೆಯಲಿದ್ದು ಈ ಕೆಳಗಿನ ಜೂಮ್ ಕೊಂಡಿಯನ್ನು ಬಳಸಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದ ನೇರ ಪ್ರಸಾರವು ಜನಶಕ್ತಿ ಮೀಡಿಯಾ ಫೆಸ್ಬುಕ್ ನಲ್ಲಿ ಪ್ರಸಾರವಾಗಲಿದೆ.

“ಪುಸ್ತಕ ಪ್ರೀತಿ ತಿಂಗಳ ಮಾತುಕತೆ”
ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ
Time: Feb 20, 2021 05:00 PM 

ಈ ಲಿಂಕ್ ಕ್ಲಿಕ್ ಮಾಡಿ : “ಪುಸ್ತಕ ಪ್ರೀತಿ ತಿಂಗಳ ಮಾತುಕತೆ” ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ

Meeting ID: 876 7557 0684
Passcode: 655960


ಇದನ್ನೂ ಓದಿ: ‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...