Homeಕರ್ನಾಟಕರೈತ ಹೋರಾಟದ ಕುರಿತ 'ಹೊನ್ನಾರು ಒಕ್ಕಲು', ‘ಕದನ ಕಣ’ ಪುಸ್ತಕಗಳ ಬಿಡುಗಡೆ

ರೈತ ಹೋರಾಟದ ಕುರಿತ ‘ಹೊನ್ನಾರು ಒಕ್ಕಲು’, ‘ಕದನ ಕಣ’ ಪುಸ್ತಕಗಳ ಬಿಡುಗಡೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 87 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ರೈತ ಹೋರಾಟವನ್ನು ಕೋಟ್ಯಂತರ ಜನರು ತಮ್ಮದೇ ಆದ ರೀತಿಯಲ್ಲಿ ಬೆಂಬಲಿಸುತ್ತಿದ್ದಾರೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಐತಿಹಾಸಿಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಸೃಜನಶೀಲ ಕೆಲಸಗಳು ಹೊರಬರುತ್ತಿವೆ. ಇದರ ಭಾಗವಾಗಿ ರೈತ ಹೋರಾಟದ ಸುತ್ತಲಿನ ವಿದ್ಯಮಾನಗಳ ಕುರಿತ 2 ಪುಸ್ತಕಗಳು ಫೆ. 20 ರಂದು ಬಿಡುಗಡೆಯಾಗುತ್ತಿದೆ.

ರೈತ ಚಳುವಳಿಯ ಕುರಿತು ಎರಡು ಪುಸ್ತಕಗಳ ಬಿಡುಗಡೆ ಮತ್ತು “ದೆಹಲಿ ಗಡಿಯ ರೈತರೊಂದಿಗೆ ಕನ್ನಡ ಮನಸ್ಸುಗಳು” ಕುರಿತು ‘ಪುಸ್ತಕ ಪ್ರೀತಿ ತಿಂಗಳ ಮಾತುಕತೆ’ ಕಾರ್ಯಕ್ರಮವು ಫೆ. 20 ರಂದು ನಡೆಯಲಿದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ದೇಶದಲ್ಲಿ ಜನತಾಂತ್ರಿಕ ನೆಲೆಗಳು ದುರ್ಬಲಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಹೋರಾಟ ನಡೆಸಿರುವ ಅನ್ನದಾತರು ಪ್ರಜಾಪ್ರಭುತ್ವದ ಎಳೆಗಳನ್ನು ಗಟ್ಟಿಗೊಳಿಸುವ ಮಹತ್ವದ ಚಳುವಳಿಯನ್ನು ರೂಪಿಸುತ್ತಿದ್ದಾರೆ. ಇದನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಕಳೆದ ಎರಡೂವರೆ ತಿಂಗಳಿಂದಲೂ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ದಿಶಾ ಬಂಧನ ಕಾನೂನುಪಾಲನೆಯ ಲೋಪದೋಷ ಅಷ್ಟೇ ಅಲ್ಲ; ಪ್ರಜಾಪ್ರಭುತ್ವದ ಅಣಕು ಕೂಡ

ಸರ್ಕಾರವನ್ನೇ ಬೆಚ್ಚಿ ಬೀಳಿಸುವಂತಹ ಮಟ್ಟದಲ್ಲಿ ರೈತರಿಗೆ ಬೆಂಬಲ ವ್ಯಕ್ತವಾಗಿದೆ. 2021ರ ಗಣರಾಜ್ಯೋತ್ಸವ ‘ರೈತಗಣರಾಜ್ಯೋತ್ಸವ’ವಾಗಿ ಮಾರ್ಪಟ್ಟಿತು. ಇದೇ ಸಂದರ್ಭದಲ್ಲಿ ಬರಹಗಾರರು, ಕಲಾವಿದರು, ಸಾಹಿತಿಗಳು ತಮ್ಮ ಕಾಳಜಿಯನ್ನು ಬರಹದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ವಿಶ್ವದೆಲ್ಲೆಡೆಗಳಿಂದ ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆಯುತ್ತಿವೆ. ರೈತರ ಕುರಿತು ಸಾವಿರಾರು ಬರಹಗಾರರು ಕವಿತೆ, ಕತೆ, ಲೇಖನ, ಹಾಡು, ನಾಟಕಗಳ ಮೂಲಕ ಸ್ಪಂದಿಸುತ್ತಿದ್ದಾರೆ.

‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು)

ಈ ಹೋರಾಟಕ್ಕೆ ಸ್ಪಂದಿಸಿದ ಕನ್ನಡದ ಕವಿಗಳಿಂದ ರೈತರ ಆಂದೋಲನ ಕುರಿತ ಕವನಗಳನ್ನು ತರಿಸಿ, ‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು) ಎಂಬ ಹೆಸರಿನ ಕವನ ಸಂಕಲನವನ್ನು ರೂಪಿಸಲಾಗಿದೆ. 64 ಹಿರಿಯ ಕಿರಿಯ ಕವಿಗಳ ಕವಿತೆಗಳು ಇಲ್ಲಿವೆ. ಈ ಸಂಕಲನವನ್ನು ಡಾ. ಕೆ ಷರೀಫಾ ಮತ್ತು ಯಮುನಾ ಗಾಂವ್ಕರ್ ಸಂಪಾದಿಸಿದ್ದಾರೆ. ಈ ಸಂಕಲನದಲ್ಲಿ ರೈತ ಚಳುವಳಿಗೆ ಬೆಂಬಲವಾಗಿ ಕಲಾವಿದರು ಬರೆದ ಕಲಾತ್ಮಕ ಪೋಸ್ಟರುಗಳು, ಕಲಾಕೃತಿಗಳ ಚಿತ್ರಗಳನ್ನು ಕವಿತೆಗಳ ಜತೆ ಕೊಡಲಾಗಿದೆ.

‘ಕದನ ಕಣ’

ರೈತ ಚಳುವಳಿ ತೀವ್ರವಾಗುತ್ತಿದ್ದಾಗ ಜನವರಿಯ ಎರಡನೇ ವಾರದಲ್ಲಿ ದೆಹಲಿ ರೈತರ ಚಳುವಳಿಗೆ ಕರ್ನಾಟಕ ರೈತರ ಸೌಹಾರ್ದ ಬೆಂಬಲ ಕೊಡಲು ಮತ್ತು ಆ ಚಾರಿತ್ರಿಕ ಚಳುವಳಿಯ ಪ್ರತ್ಯಕ್ಷ ಅನುಭವ ಪಡೆಯಲು ಕರ್ನಾಟಕ ಪ್ರಾಂತ ರೈತ ಸಂಘ ಅದರ ರಾಜ್ಯ ನಾಯಕರುಗಳಾದ ಎಚ್.ಆರ್. ನವೀನ್ ಕುಮಾರ್ ಮತ್ತು ಜಗದೀಶ ಸೂರ್ಯ ಅವರನ್ನು ದೆಹಲಿಗೆ ಕಳಿಸಿತು. ಅವರು 10 ದಿನಗಳ ಪ್ರವಾಸದ ಅವಧಿಯಲ್ಲಿ ತಮ್ಮ ಶ್ರೀಮಂತ ಅನುಭವವನ್ನು ಬರಹ, ಫೊಟೊ, ಲೈವ್ ವಿಡಿಯೊ ಗಳ ಮೂಲಕ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ದೆಹಲಿಯ ರೈತ ಹೋರಾಟವನ್ನು ಜಾಣ ಮೌನ, ಸುಳ್ಳು ಸುದ್ದಿ, ಪೊಳ್ಳು ಆಪಾದನೆಗಳ ಮೂಲಕ ನಿರ್ಲಕ್ಷ, ಅವಹೇಳನಕ್ಕೆ ಗುರಿ ಮಾಡಿರುವ “ಗೋದಿ ಮೀಡಿಯಾ”ದ ಅಸಹ್ಯ ವರ್ತನೆಯ ಸಂದರ್ಭದಲ್ಲಿ ಇವು ಬಹಳ ಜನಪ್ರಿಯವಾದವು. ಈ ಚಾರಿತ್ರಿಕ ಚಳುವಳಿಯ ಅಮೂಲ್ಯ ಅನುಭವಗಳ ಕುರಿತ ಚಾರಿತ್ರಿಕ ಬರಹಗಳನ್ನು ಫೊಟೊಗಳನ್ನು ಇನ್ನಷ್ಟು ಸೇರಿಸಿ, ಪರಿಷ್ಕರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಬೇಕು ಎಂಬ ಒತ್ತಾಯದ ಮೇರೆಗೆ ಸ್ವತಃ ಉತ್ತಮ ಪತ್ರಕರ್ತ, ಫೊಟೊಗ್ರಾಫರ್ ಆಗಿರುವ ಎಚ್.ಆರ್. ನವೀನ್ ಕುಮಾರ್ ಅದನ್ನು ಪುಸ್ತಕದ ರೂಪದಲ್ಲಿ ಬರೆದಿದ್ದಾರೆ. ಅದರಲ್ಲಿ ತಾವೇ ತೆಗೆದ ಉತ್ತಮ ಪೋಟೊಗಳನ್ನು ಸೇರಿಸಿದ್ದಾರೆ. ಇದಕ್ಕೆ ‘ಕದನ ಕಣ’ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಈ ಎರಡೂ ಪುಸ್ತಕಗಳನ್ನು ಕ್ರಿಯಾ ಮಾಧ್ಯಮ ಪ್ರಕಟಿಸುತ್ತಿದ್ದು, ಇವುಗಳೆರಡಕ್ಕೂ ದೆಹಲಿಯಲ್ಲಿ ವಾಸವಿದ್ದು ರೈತರ ಚಳುವಳಿಯ ನೇರ ಸಂಪರ್ಕ ಇಟ್ಟುಕೊಂಡಿರುವ ಅದರ ಆಳವಾದ ತಿಳುವಳಿಕೆ ಇರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಮುನ್ನುಡಿ ಬರೆದು ಬೆನ್ನು ತಟ್ಟಿದ್ದಾರೆ. ದೆಹಲಿ ರೈತರ ಚಳುವಳಿಯ ಕುರಿತಾದ ‘ಹೊನ್ನಾರು ಒಕ್ಕಲು’ ಮತ್ತು ‘ಕದನ ಕಣ’ ಎಂಬ ಈ ಎರಡು ಪುಸ್ತಕಗಳನ್ನು ಫೆಬ್ರುವರಿ 20ರಂದು ನಡೆಯುವ ಆನ್ ಲೈನ್ ಸಭೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ.

ದೆಹಲಿಗೆ ಎರಡು ಬಾರಿ ಭೇಟಿಯಿತ್ತು ದೆಹಲಿ ರೈತರ ಚಳುವಳಿಯ ಕುರಿತು ಸಾಕ್ಷ್ಯ ಚಿತ್ರ ತಯಾರಿಸುತ್ತಿರುವ ಕೇಸರಿ ಹರವು, ಚಳುವಳಿಯ ನಾಯಕತ್ವ ವಹಿಸುತ್ತಿರುವ ರೈತ ಸಂಘಟನೆಗಳಲ್ಲಿ ಒಂದಾದ ಅಖಿಲ ಭಾರತ ಕಿಸಾನ ಸಭಾದ ಜಂಟಿ ಕಾರ್ಯದರ್ಶಿ ವಿಜೂ ಕೃಷ್ಣನ್ ಮತ್ತು ಡಾ. ಪುರುಷೋತ್ತಮ ಬಿಳಿಮಲೆ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡೂ ಪುಸ್ತಕಗಳ ಲೇಖಕರು, ಕವಿಗಳು, ಸಂಪಾದಕರು ಭಾಗವಹಿಸಲಿದ್ದಾರೆ ಎಂದು ಕ್ರಿಯಾ ಮಾಧ್ಯಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವು ಆನ್‌ಲೈನ್‌ನಲ್ಲಿ ನಡೆಯಲಿದ್ದು ಈ ಕೆಳಗಿನ ಜೂಮ್ ಕೊಂಡಿಯನ್ನು ಬಳಸಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದ ನೇರ ಪ್ರಸಾರವು ಜನಶಕ್ತಿ ಮೀಡಿಯಾ ಫೆಸ್ಬುಕ್ ನಲ್ಲಿ ಪ್ರಸಾರವಾಗಲಿದೆ.

“ಪುಸ್ತಕ ಪ್ರೀತಿ ತಿಂಗಳ ಮಾತುಕತೆ”
ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ
Time: Feb 20, 2021 05:00 PM 

ಈ ಲಿಂಕ್ ಕ್ಲಿಕ್ ಮಾಡಿ : “ಪುಸ್ತಕ ಪ್ರೀತಿ ತಿಂಗಳ ಮಾತುಕತೆ” ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ

Meeting ID: 876 7557 0684
Passcode: 655960


ಇದನ್ನೂ ಓದಿ: ‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...