Homeಕರ್ನಾಟಕರೈತ ಹೋರಾಟದ ಕುರಿತ 'ಹೊನ್ನಾರು ಒಕ್ಕಲು', ‘ಕದನ ಕಣ’ ಪುಸ್ತಕಗಳ ಬಿಡುಗಡೆ

ರೈತ ಹೋರಾಟದ ಕುರಿತ ‘ಹೊನ್ನಾರು ಒಕ್ಕಲು’, ‘ಕದನ ಕಣ’ ಪುಸ್ತಕಗಳ ಬಿಡುಗಡೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 87 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ರೈತ ಹೋರಾಟವನ್ನು ಕೋಟ್ಯಂತರ ಜನರು ತಮ್ಮದೇ ಆದ ರೀತಿಯಲ್ಲಿ ಬೆಂಬಲಿಸುತ್ತಿದ್ದಾರೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಐತಿಹಾಸಿಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಸೃಜನಶೀಲ ಕೆಲಸಗಳು ಹೊರಬರುತ್ತಿವೆ. ಇದರ ಭಾಗವಾಗಿ ರೈತ ಹೋರಾಟದ ಸುತ್ತಲಿನ ವಿದ್ಯಮಾನಗಳ ಕುರಿತ 2 ಪುಸ್ತಕಗಳು ಫೆ. 20 ರಂದು ಬಿಡುಗಡೆಯಾಗುತ್ತಿದೆ.

ರೈತ ಚಳುವಳಿಯ ಕುರಿತು ಎರಡು ಪುಸ್ತಕಗಳ ಬಿಡುಗಡೆ ಮತ್ತು “ದೆಹಲಿ ಗಡಿಯ ರೈತರೊಂದಿಗೆ ಕನ್ನಡ ಮನಸ್ಸುಗಳು” ಕುರಿತು ‘ಪುಸ್ತಕ ಪ್ರೀತಿ ತಿಂಗಳ ಮಾತುಕತೆ’ ಕಾರ್ಯಕ್ರಮವು ಫೆ. 20 ರಂದು ನಡೆಯಲಿದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ದೇಶದಲ್ಲಿ ಜನತಾಂತ್ರಿಕ ನೆಲೆಗಳು ದುರ್ಬಲಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಹೋರಾಟ ನಡೆಸಿರುವ ಅನ್ನದಾತರು ಪ್ರಜಾಪ್ರಭುತ್ವದ ಎಳೆಗಳನ್ನು ಗಟ್ಟಿಗೊಳಿಸುವ ಮಹತ್ವದ ಚಳುವಳಿಯನ್ನು ರೂಪಿಸುತ್ತಿದ್ದಾರೆ. ಇದನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಕಳೆದ ಎರಡೂವರೆ ತಿಂಗಳಿಂದಲೂ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ದಿಶಾ ಬಂಧನ ಕಾನೂನುಪಾಲನೆಯ ಲೋಪದೋಷ ಅಷ್ಟೇ ಅಲ್ಲ; ಪ್ರಜಾಪ್ರಭುತ್ವದ ಅಣಕು ಕೂಡ

ಸರ್ಕಾರವನ್ನೇ ಬೆಚ್ಚಿ ಬೀಳಿಸುವಂತಹ ಮಟ್ಟದಲ್ಲಿ ರೈತರಿಗೆ ಬೆಂಬಲ ವ್ಯಕ್ತವಾಗಿದೆ. 2021ರ ಗಣರಾಜ್ಯೋತ್ಸವ ‘ರೈತಗಣರಾಜ್ಯೋತ್ಸವ’ವಾಗಿ ಮಾರ್ಪಟ್ಟಿತು. ಇದೇ ಸಂದರ್ಭದಲ್ಲಿ ಬರಹಗಾರರು, ಕಲಾವಿದರು, ಸಾಹಿತಿಗಳು ತಮ್ಮ ಕಾಳಜಿಯನ್ನು ಬರಹದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ವಿಶ್ವದೆಲ್ಲೆಡೆಗಳಿಂದ ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆಯುತ್ತಿವೆ. ರೈತರ ಕುರಿತು ಸಾವಿರಾರು ಬರಹಗಾರರು ಕವಿತೆ, ಕತೆ, ಲೇಖನ, ಹಾಡು, ನಾಟಕಗಳ ಮೂಲಕ ಸ್ಪಂದಿಸುತ್ತಿದ್ದಾರೆ.

‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು)

ಈ ಹೋರಾಟಕ್ಕೆ ಸ್ಪಂದಿಸಿದ ಕನ್ನಡದ ಕವಿಗಳಿಂದ ರೈತರ ಆಂದೋಲನ ಕುರಿತ ಕವನಗಳನ್ನು ತರಿಸಿ, ‘ಹೊನ್ನಾರು ಒಕ್ಕಲು’ (ರೈತ ಆಂದೋಲನದ ಕವಿತೆಗಳು) ಎಂಬ ಹೆಸರಿನ ಕವನ ಸಂಕಲನವನ್ನು ರೂಪಿಸಲಾಗಿದೆ. 64 ಹಿರಿಯ ಕಿರಿಯ ಕವಿಗಳ ಕವಿತೆಗಳು ಇಲ್ಲಿವೆ. ಈ ಸಂಕಲನವನ್ನು ಡಾ. ಕೆ ಷರೀಫಾ ಮತ್ತು ಯಮುನಾ ಗಾಂವ್ಕರ್ ಸಂಪಾದಿಸಿದ್ದಾರೆ. ಈ ಸಂಕಲನದಲ್ಲಿ ರೈತ ಚಳುವಳಿಗೆ ಬೆಂಬಲವಾಗಿ ಕಲಾವಿದರು ಬರೆದ ಕಲಾತ್ಮಕ ಪೋಸ್ಟರುಗಳು, ಕಲಾಕೃತಿಗಳ ಚಿತ್ರಗಳನ್ನು ಕವಿತೆಗಳ ಜತೆ ಕೊಡಲಾಗಿದೆ.

‘ಕದನ ಕಣ’

ರೈತ ಚಳುವಳಿ ತೀವ್ರವಾಗುತ್ತಿದ್ದಾಗ ಜನವರಿಯ ಎರಡನೇ ವಾರದಲ್ಲಿ ದೆಹಲಿ ರೈತರ ಚಳುವಳಿಗೆ ಕರ್ನಾಟಕ ರೈತರ ಸೌಹಾರ್ದ ಬೆಂಬಲ ಕೊಡಲು ಮತ್ತು ಆ ಚಾರಿತ್ರಿಕ ಚಳುವಳಿಯ ಪ್ರತ್ಯಕ್ಷ ಅನುಭವ ಪಡೆಯಲು ಕರ್ನಾಟಕ ಪ್ರಾಂತ ರೈತ ಸಂಘ ಅದರ ರಾಜ್ಯ ನಾಯಕರುಗಳಾದ ಎಚ್.ಆರ್. ನವೀನ್ ಕುಮಾರ್ ಮತ್ತು ಜಗದೀಶ ಸೂರ್ಯ ಅವರನ್ನು ದೆಹಲಿಗೆ ಕಳಿಸಿತು. ಅವರು 10 ದಿನಗಳ ಪ್ರವಾಸದ ಅವಧಿಯಲ್ಲಿ ತಮ್ಮ ಶ್ರೀಮಂತ ಅನುಭವವನ್ನು ಬರಹ, ಫೊಟೊ, ಲೈವ್ ವಿಡಿಯೊ ಗಳ ಮೂಲಕ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ದೆಹಲಿಯ ರೈತ ಹೋರಾಟವನ್ನು ಜಾಣ ಮೌನ, ಸುಳ್ಳು ಸುದ್ದಿ, ಪೊಳ್ಳು ಆಪಾದನೆಗಳ ಮೂಲಕ ನಿರ್ಲಕ್ಷ, ಅವಹೇಳನಕ್ಕೆ ಗುರಿ ಮಾಡಿರುವ “ಗೋದಿ ಮೀಡಿಯಾ”ದ ಅಸಹ್ಯ ವರ್ತನೆಯ ಸಂದರ್ಭದಲ್ಲಿ ಇವು ಬಹಳ ಜನಪ್ರಿಯವಾದವು. ಈ ಚಾರಿತ್ರಿಕ ಚಳುವಳಿಯ ಅಮೂಲ್ಯ ಅನುಭವಗಳ ಕುರಿತ ಚಾರಿತ್ರಿಕ ಬರಹಗಳನ್ನು ಫೊಟೊಗಳನ್ನು ಇನ್ನಷ್ಟು ಸೇರಿಸಿ, ಪರಿಷ್ಕರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಬೇಕು ಎಂಬ ಒತ್ತಾಯದ ಮೇರೆಗೆ ಸ್ವತಃ ಉತ್ತಮ ಪತ್ರಕರ್ತ, ಫೊಟೊಗ್ರಾಫರ್ ಆಗಿರುವ ಎಚ್.ಆರ್. ನವೀನ್ ಕುಮಾರ್ ಅದನ್ನು ಪುಸ್ತಕದ ರೂಪದಲ್ಲಿ ಬರೆದಿದ್ದಾರೆ. ಅದರಲ್ಲಿ ತಾವೇ ತೆಗೆದ ಉತ್ತಮ ಪೋಟೊಗಳನ್ನು ಸೇರಿಸಿದ್ದಾರೆ. ಇದಕ್ಕೆ ‘ಕದನ ಕಣ’ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಈ ಎರಡೂ ಪುಸ್ತಕಗಳನ್ನು ಕ್ರಿಯಾ ಮಾಧ್ಯಮ ಪ್ರಕಟಿಸುತ್ತಿದ್ದು, ಇವುಗಳೆರಡಕ್ಕೂ ದೆಹಲಿಯಲ್ಲಿ ವಾಸವಿದ್ದು ರೈತರ ಚಳುವಳಿಯ ನೇರ ಸಂಪರ್ಕ ಇಟ್ಟುಕೊಂಡಿರುವ ಅದರ ಆಳವಾದ ತಿಳುವಳಿಕೆ ಇರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಮುನ್ನುಡಿ ಬರೆದು ಬೆನ್ನು ತಟ್ಟಿದ್ದಾರೆ. ದೆಹಲಿ ರೈತರ ಚಳುವಳಿಯ ಕುರಿತಾದ ‘ಹೊನ್ನಾರು ಒಕ್ಕಲು’ ಮತ್ತು ‘ಕದನ ಕಣ’ ಎಂಬ ಈ ಎರಡು ಪುಸ್ತಕಗಳನ್ನು ಫೆಬ್ರುವರಿ 20ರಂದು ನಡೆಯುವ ಆನ್ ಲೈನ್ ಸಭೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ.

ದೆಹಲಿಗೆ ಎರಡು ಬಾರಿ ಭೇಟಿಯಿತ್ತು ದೆಹಲಿ ರೈತರ ಚಳುವಳಿಯ ಕುರಿತು ಸಾಕ್ಷ್ಯ ಚಿತ್ರ ತಯಾರಿಸುತ್ತಿರುವ ಕೇಸರಿ ಹರವು, ಚಳುವಳಿಯ ನಾಯಕತ್ವ ವಹಿಸುತ್ತಿರುವ ರೈತ ಸಂಘಟನೆಗಳಲ್ಲಿ ಒಂದಾದ ಅಖಿಲ ಭಾರತ ಕಿಸಾನ ಸಭಾದ ಜಂಟಿ ಕಾರ್ಯದರ್ಶಿ ವಿಜೂ ಕೃಷ್ಣನ್ ಮತ್ತು ಡಾ. ಪುರುಷೋತ್ತಮ ಬಿಳಿಮಲೆ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡೂ ಪುಸ್ತಕಗಳ ಲೇಖಕರು, ಕವಿಗಳು, ಸಂಪಾದಕರು ಭಾಗವಹಿಸಲಿದ್ದಾರೆ ಎಂದು ಕ್ರಿಯಾ ಮಾಧ್ಯಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವು ಆನ್‌ಲೈನ್‌ನಲ್ಲಿ ನಡೆಯಲಿದ್ದು ಈ ಕೆಳಗಿನ ಜೂಮ್ ಕೊಂಡಿಯನ್ನು ಬಳಸಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದ ನೇರ ಪ್ರಸಾರವು ಜನಶಕ್ತಿ ಮೀಡಿಯಾ ಫೆಸ್ಬುಕ್ ನಲ್ಲಿ ಪ್ರಸಾರವಾಗಲಿದೆ.

“ಪುಸ್ತಕ ಪ್ರೀತಿ ತಿಂಗಳ ಮಾತುಕತೆ”
ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ
Time: Feb 20, 2021 05:00 PM 

ಈ ಲಿಂಕ್ ಕ್ಲಿಕ್ ಮಾಡಿ : “ಪುಸ್ತಕ ಪ್ರೀತಿ ತಿಂಗಳ ಮಾತುಕತೆ” ಕದನ ಕಣ & ಹೊನ್ನಾರು ಒಕ್ಕಲು ಪುಸ್ತಕ ಬಿಡುಗಡೆ

Meeting ID: 876 7557 0684
Passcode: 655960


ಇದನ್ನೂ ಓದಿ: ‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...