Homeಮುಖಪುಟಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು 'ಆಧಾರ ರಹಿತ' ಎಂದ ಇರಾನ್‌

ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

- Advertisement -
- Advertisement -

ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದ್ದು, ಆಧಾರ ರಹಿತ ಆರೋಪ ಎಂದು ಹೇಳಿದೆ.

ದಾಳಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರರು, ಅಮೆರಿಕದ ಆರೋಪ ಆಧಾರ ರಹಿತವಾಗಿದೆ. ಇರಾನ್‌ನಿಂದ ಉಡಾವಣೆಯಾದ ಡ್ರೋನ್ ಹಿಂದೂ ಮಹಾಸಾಗರದಲ್ಲಿ ಹಡಗಿನ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಹೇಳಿದ ಒಂದು ದಿನದ ನಂತರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಶನಿವಾರ ಬೆಳಿಗ್ಗೆ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿತ್ತು. 2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿತ್ತು.

ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. 20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು.

ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಬೆದರಿಸಿತ್ತು. ಇದರ ಬೆನ್ನಲ್ಲೇ  ಇರಾನ್‌ ವಿರುದ್ಧ ಅಮೆರಿಕ ಡ್ರೋನ್‌ ದಾಳಿಯ ಆರೋಪವನ್ನು ಮಾಡಿತ್ತು.

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದರು. ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದರು.

ಇದನ್ನು ಓದಿ: ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...