Homeಮುಖಪುಟಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು 'ಆಧಾರ ರಹಿತ' ಎಂದ ಇರಾನ್‌

ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

- Advertisement -
- Advertisement -

ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದ್ದು, ಆಧಾರ ರಹಿತ ಆರೋಪ ಎಂದು ಹೇಳಿದೆ.

ದಾಳಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರರು, ಅಮೆರಿಕದ ಆರೋಪ ಆಧಾರ ರಹಿತವಾಗಿದೆ. ಇರಾನ್‌ನಿಂದ ಉಡಾವಣೆಯಾದ ಡ್ರೋನ್ ಹಿಂದೂ ಮಹಾಸಾಗರದಲ್ಲಿ ಹಡಗಿನ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಹೇಳಿದ ಒಂದು ದಿನದ ನಂತರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಶನಿವಾರ ಬೆಳಿಗ್ಗೆ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿತ್ತು. 2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿತ್ತು.

ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. 20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು.

ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಬೆದರಿಸಿತ್ತು. ಇದರ ಬೆನ್ನಲ್ಲೇ  ಇರಾನ್‌ ವಿರುದ್ಧ ಅಮೆರಿಕ ಡ್ರೋನ್‌ ದಾಳಿಯ ಆರೋಪವನ್ನು ಮಾಡಿತ್ತು.

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದರು. ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದರು.

ಇದನ್ನು ಓದಿ: ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...