Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...