Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...