Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...