Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...