Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...