Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...