Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...