Homeಕರ್ನಾಟಕಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ...

ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

- Advertisement -
- Advertisement -

ಬಸವಾದಿ ಶರಣರ ವಚನಗಳ ಓದು ನಮ್ಮನ್ನು ಒಂದು ಕಡೆ ನಿಲ್ಲಿಸಲಾರದು. ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ಅಲೆದು ತತ್ವ ಪ್ರಸಾರ ಮಾಡಲೇಬೇಕು ಎಂಬ ತುಡಿತ ಉಂಟಾಗುತ್ತದೆ. ಜನ ಸಾಮಾನ್ಯರಲ್ಲಿ ಹಬ್ಬಿರುವ ಜಾತಿಯತೆ, ಮೌಢ್ಯ, ಮೇಲು ಕೀಳು ಭಾವನೆಗಳನ್ನು ಶರಣರ ವಚನ ಸಾಹಿತ್ಯದ ಔಷಧದ ಮೂಲಕ ಇಲಾಜು ಮಾಡಲು ಖಂಡಿತ ಸಾಧ್ಯವಿದೆ. ನಮ್ಮ ಸಮಾಜಕ್ಕೆ ಅಂಟಿಕೊಂಡಿರುವ ವೈದಿಕ ವೈರಸ್‍ಗಳು ನಾಶಗೊಳಿಸುವ ಶಕ್ತಿ ವಚನ ಸಾಹಿತ್ಯಕ್ಕೆ ಇದೆ. ಇದನ್ನೆಲ್ಲ ಮನಗಂಡು ಬಸವಾದಿ ಶರಣರ ತತ್ವಗಳನ್ನು ಪಸರಿಸುವ ಕೆಲಸವನ್ನು ಮಾಡಲು ನಾನು ಯಾವತ್ತೂ ಸಿದ್ಧನಾಗಿರುತ್ತೇನೆ.

ಬಸವ ಜಯಂತಿಯ ಸಂದರ್ಭದಲ್ಲಂತೂ ನಾನು ಊರಲ್ಲಿರುವುದು ಸಾಧ್ಯವೆ ಇಲ್ಲ. ಈ ಬಾರಿಯ ಬಸವ ಜಯಂತಿಗೆ ಬಸವನ ಕರ್ಮಭೂಮಿಗೆ ಹತ್ತಿರ ಇರುವ ಹುಮ್ನಾಬಾದಗೆ ಹೋಗುವ ಸಂದರ್ಭ ಒದಗಿ ಬಂತು. ಹುಮ್ನಾಬಾದಗೆ ಸಮೀಪ ಇರುವ ಚಿಟಗುಪ್ಪದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದ ಕಲ್ಯಾಣ ನಾಡಿನ ಶರಣ ಸಾಹಿತ್ಯ ಪರಿಷತ್ತಿಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಾ. ದೇ.ಜ.ಗೌಡರ ಮಾತುಗಳು ನನಗೆ ನೆನಪಾದವು. ಅರಿಕೇಸರಿ ಆಸ್ಥಾನದ ಕವಿ ಪಂಪ ತನ್ನ ಕಾವ್ಯದಲ್ಲಿ “ನೆನೆವುದೆನ್ನ ಮನಂ ಬನವಾಸಿ ದೇಶಮಂ” ಎನ್ನುವಂತೆಯೆ ಡಾ. ದೇ.ಜವರೇಗೌಡರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ “ಬಸವಾದಿ ಶರಣರ ವಚನಗಳನ್ನು ಓದಿದ ಮೇಲೆ ನನಗೆ ಮರು ಹುಟ್ಟಿನ ಬಗೆಗೆ ಯಾವುದೆ ನಂಬಿಕೆಗಳಿಲ್ಲ. ಆದರೆ ಆಕಸ್ಮಿಕವಾಗಿ ಹಾಗೇನಾದರೂ ಇದ್ದರೆ, ನಾನು ಮುಂದಿನ ಜನ್ಮದಲ್ಲಿ ಕಲ್ಯಾಣದ ಪರಿಸರದಲ್ಲಿ ಹುಟ್ಟುವಂತೆ ಮಾಡು ಎಂದು ಕೇಳಿಕೊಳ್ಳುತ್ತೇನೆ. ಮರಿ ದುಂಬಿ ಬೇಡ ಕನಿಷ್ಟ ಪಕ್ಷ ಮರಿ ಹಂದಿಯನ್ನಾಗಿಯಾದರೂ ಈ ಕಲ್ಯಾಣ ನಾಡಿನಲ್ಲಿ ಹುಟ್ಟಿಸು!” ಎಂದು ಸಾರ್ವಜನಿಕ ಸಭೆಯಲ್ಲಿಯೆ ಅವಲತ್ತುಕೊಳ್ಳುತ್ತಾರೆ.

ದೇ.ಜ.ಗೌಡರ ಈ ಮಾತುಗಳನ್ನು ನೆನಪಿಸುತ್ತಲೆ ಬಸವಾದಿ ಶರಣರು ಕಟ್ಟ ಬಯಸಿದ ಸಮಾಜದ ಕುರಿತು ನಾನು ಮುಕ್ತವಾಗಿ ಮನಬಿಚ್ಚಿ ಮಾತನಾಡಿದೆ.
ಗುರು ಉಪದೇಶ ಮಂತ್ರ ವೈದ್ಯ.
ಜಂಗಮ ಉಪದೇಶ ಶಸ್ತ್ರ ವೈದ್ಯ ನೋಡಾ,
ಭವರೋಗ ಕಳೆವ ಪರಿಯ ನೋಡಾ.
ಕೂಡಲಸಂಗನ ಶರಣರ ಅನುಭಾವ ಮಡಿವಾಳನ ಕಾಯಕದಂತೆ.

ಎಂಬ ಬಸವಣ್ಣನವರ ವಚನಗಳನ್ನು ಸಾಂದರ್ಭಿಕವಾಗಿ ಹೇಳುತ್ತ ಲಿಂಗಾಯತವೆಂಬುದು ಒಂದು ಜಾತಿ ಅಲ್ಲವೆ ಅಲ್ಲ. ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಸೂಳೆ ಸಂಕವ್ವೆ, ಕದಿರೆಯ ರೆಮ್ಮವ್ವ, ಒಕ್ಕಲಿಗ ಮುದ್ದಣ್ಣ, ಮಡಿವಾಳ ಮಾಚಿದೇವ, ಅಲ್ಲಮ ಹೀಗೆ 770 ಅಮರ ಗಣಂಗಳು ಕೂಡಿ ಕಟ್ಟಿದ ಸಂಸ್ಥೆ ಲಿಂಗಾಯತ ಎಂದು ಸಭೆಗೆ ವಿವರಿಸಿದೆ. ಇಷ್ಟಲಿಂಗ ಅರಿವಿನ ಕುರುಹು. ಆಚಾರದ ಪ್ರತೀಕ. ಲಿಂಗ ಕಟ್ಟಿಕೊಂಡ ಮೇಲೆ ಸಕಲ ಜೀವಾತ್ಮರಿಗೆ ಲೇಸಬಯಸುವವರಾಗಬೇಕು. ರಾಗ ದ್ವೇಷಗಳು ಇರಬಾರದು. ಗುಡಿ ಗುಂಡಾರ ಕಟ್ಟುವುದು ಮುಖ್ಯ ಅಲ್ಲವೇ ಅಲ್ಲ. ಗಂಟೆ ಶಂಖ ಜಾಗಟೆಗಳು ಅರ್ಥ ಕಳೆದುಕೊಂಡು ನಮ್ಮ ಆತ್ಮಸಾಕ್ಷಿಯ ಗಂಟೆ ನಿನದಿಸಬೇಕು. ಯಾವ ಶಾಸ್ತ್ರ ಪುರಾಣ ವೇದ ಆಗಮಗಳಿಗಿಂತ ಎದೆಯ ದನಿ ಬಹಳ ಪ್ರಮುಖವಾದುದು.

ಲಿಂಗವ ಪೂಜಿಸಿ ಫಲವೇನಯ್ಯಾ,
ಸಮರತಿ ಸಮಕಳೆ ಸಮ ಸುಖವನರಿಯದನ್ನಕ್ಕ
ಲಿಂಗವ ಪೂಜಿಸಿ ಫಲವೇನಯ್ಯಾ
ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ
ನದಿ ಬೆರಸಿದಂತಾಗದನ್ನಕ್ಕ

ಇಷ್ಟಲಿಂಗ ಕಟ್ಟಿಕೊಂಡೂ ಸ್ಥಾವರ ದೇವರಿಗೆ ಹೋಗುವುದೆಂದರೆ ಮಾಡಿಕೊಂಡು ಗಂಡನ ಬಿಟ್ಟು ಅನ್ಯ ಪುರುಷನತ್ತ ಹಾತೊರೆವಂತೆ ಎಂದು ತೀಕ್ಷ್ಣವಾಗಿ ನುಡಿದಾಗ ಹುಮ್ನಾಬಾದನ ಶಾಸಕ, ಗಣಿ ಮತ್ತು ಭೂಗರ್ಭ ಇಲಾಖೆಯ ಮಂತ್ರಿ ರಾಜಶೇಖರ ಪಾಟೀಲ ನನ್ನತ್ತ ಬೆಕ್ಕಸ ಬೆರರಾಗಿ ನೋಡಿದರು. ಕುಲ ಶ್ರೇಷ್ಠ ಎನ್ನುವುದು ಬ್ರಾಹ್ಮಣ್ಯ. ದುಡಿದು ಉಣ್ಣುವವನು ದೊಡ್ಡವನು. ಕಾಯಕದಲ್ಲಿ ದೊಡ್ಡದು ಸಣ್ಣದು ಎಂಬುದು ಇಲ್ಲವೇ ಇಲ್ಲ. ದಲಾಲಿಗಳಿಲ್ಲದ, ಸ್ಥಾವರ ದೇವರುಗಳನ್ನು ಗುಡಿಸಿ ಗುಂಡಾಂತರ ಹಾಕಿದ ಧರ್ಮ ಲಿಂಗಾಯತವೆಂದಾಗ ನನ್ನೊಂದಿಗೆ ವೇದಿಕೆಯಲ್ಲಿ ಕುಳಿತ ರಾಜಶೇಖರ ಪಾಟೀಲರಿಗೆ ಇರಿಸು ಮುರಿಸು. ಅವರು ಹುಟ್ಟಾ ಲಿಂಗಾಯತರಾಗಿದ್ದರು. ವೈದಿಕರ ಕಪಿಮುಷ್ಠಿಯಲ್ಲಿ ಸಿಲುಕಿದವರು. ಮಂತ್ರಿಯಾಗಿ ಪ್ರಮಾಣ ವಚನ ತೆಗೆದುಕೊಳ್ಳುವಾಗ ತಮ್ಮ ಊರಿನ ಸ್ಥಾವರ ದೇವರಾದ ವೀರಭದ್ರನ ಹೆಸರಿನ ಮೇಲೆ ವಿಶ್ವಾಸವಿರಿಸಿದವರು.

ಜಂಗಮ ಉಪದೇಶ ಶಸ್ತ್ರವೈದ್ಯ ಎಂಬಂತೆ ನನ್ನ ಮಾತು ಅವರ ಜಂಘಾಬಲವನ್ನು ಕುಗ್ಗಿಸಿತು. ಹೀಗಾಗಿ ನಾನು ಹೀಗೆ ಮಾತಾಡುತ್ತ ಹೋದರೆ ಕರ್ಮಠ ಲಿಂಗಾಯತರ ಒಳ ಹೂರಣವೆ ಬಯಲಾಗುತ್ತದೆ ಎಂಬ ದಿಗಿಲಿನಿಂದ ಸಂಘಟಕರಿಗೆ ನಾನು ಮಾತಾಡುವುದು ಸಾಕು ಮಾಡಲು ಚೀಟಿ ನೀಡಿ ಎಂದು ಸಂಜ್ಞೆ ಮಾಡಿದರಂತೆ. ಆದರೆ ಆಕಸ್ಮಿಕವಾಗಿ ಅದೇ ಸಮಯಕ್ಕೆ ಸರಿಯಾಗಿ ನಾನು ಸಹ : “ಹೇಳಿ ಕೇಳಿ ನಾನು ‘ಗೌರಿ ಲಂಕೇಶ್ ಪತ್ರಿಕೆಯ’ ವರದಿಗಾರನಾಗಿದ್ದೆ” ಎಂದು ಹೇಳಿದ್ದೆ ತಡ. ರಾಜಶೇಖರ ಪಾಟೀಲ ಇದನ್ನು ಗಮನಿಸಿ ಸಂಘಟಕರಿಗೆ ಮತ್ತೆ ಸೂಚಿಸಿ “ಸತ್ಯಂಪೇಟೆ ಮಾತಾಡಲಿ ಬಿಡಿ. ಆ ಪತ್ರಿಕೆಯವರು ಯಾರನ್ನೂ ಬಿಟ್ಟವರಲ್ಲ. ಅವರು ಸತ್ಯವನ್ನೇ ಹೇಳುತ್ತಾರೆ. ಸುಳ್ಳನ್ನಲ್ಲ !” ಎಂದು ಹೇಳಿದರಂತೆ.

ಹಾಗಾಗಿ ನಾನು ನಿರರ್ಗಳವಾಗಿ ತಾಸೊತ್ತು ಮಾತನಾಡಿದೆ. ಮಡಿವಾಳನ ಕಾಯಕವನ್ನು ಮಾಡಿದೆ. ನನ್ನ ಮಾತು ಅಧರಕ್ಕೆ ಕಹಿ ಅನಿಸಿದರೂ , ಉದರಕ್ಕೆ ಸಿಹಿ ಉಂಟು ಮಾಡುವಂತಹವಾಗಿದ್ದವು. ಮಾತು ಮುಗಿಸಿ ವೇದಿಕೆಯಲ್ಲಿ ಕುಳಿತಾಗ ಮಂತ್ರಿಗಳು ಮನಬಿಚ್ಚಿ ನನ್ನೊಂದಿಗೆ ಬೆರೆತರು. ಗೌರಿ ಲಂಕೇಶ್ ದೈಹಿಕವಾಗಿ ಈಗ ನಮ್ಮೊಂದಿಗೆ ಇಲ್ಲದಿದ್ದರೂ ಸಹ ಅವರ ಗಟ್ಟಿ ನಿಲುವು. ಅವರ ಮಾರ್ಗ ಬಸವ ಮಾರ್ಗ ಎಂಬುದು ನನಗೆ ಮನದಟ್ಟಾಗಿ ತುಂಬಾ ಖುಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...