Homeಕರ್ನಾಟಕಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ...

ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

- Advertisement -
- Advertisement -

ಬಸವಾದಿ ಶರಣರ ವಚನಗಳ ಓದು ನಮ್ಮನ್ನು ಒಂದು ಕಡೆ ನಿಲ್ಲಿಸಲಾರದು. ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ಅಲೆದು ತತ್ವ ಪ್ರಸಾರ ಮಾಡಲೇಬೇಕು ಎಂಬ ತುಡಿತ ಉಂಟಾಗುತ್ತದೆ. ಜನ ಸಾಮಾನ್ಯರಲ್ಲಿ ಹಬ್ಬಿರುವ ಜಾತಿಯತೆ, ಮೌಢ್ಯ, ಮೇಲು ಕೀಳು ಭಾವನೆಗಳನ್ನು ಶರಣರ ವಚನ ಸಾಹಿತ್ಯದ ಔಷಧದ ಮೂಲಕ ಇಲಾಜು ಮಾಡಲು ಖಂಡಿತ ಸಾಧ್ಯವಿದೆ. ನಮ್ಮ ಸಮಾಜಕ್ಕೆ ಅಂಟಿಕೊಂಡಿರುವ ವೈದಿಕ ವೈರಸ್‍ಗಳು ನಾಶಗೊಳಿಸುವ ಶಕ್ತಿ ವಚನ ಸಾಹಿತ್ಯಕ್ಕೆ ಇದೆ. ಇದನ್ನೆಲ್ಲ ಮನಗಂಡು ಬಸವಾದಿ ಶರಣರ ತತ್ವಗಳನ್ನು ಪಸರಿಸುವ ಕೆಲಸವನ್ನು ಮಾಡಲು ನಾನು ಯಾವತ್ತೂ ಸಿದ್ಧನಾಗಿರುತ್ತೇನೆ.

ಬಸವ ಜಯಂತಿಯ ಸಂದರ್ಭದಲ್ಲಂತೂ ನಾನು ಊರಲ್ಲಿರುವುದು ಸಾಧ್ಯವೆ ಇಲ್ಲ. ಈ ಬಾರಿಯ ಬಸವ ಜಯಂತಿಗೆ ಬಸವನ ಕರ್ಮಭೂಮಿಗೆ ಹತ್ತಿರ ಇರುವ ಹುಮ್ನಾಬಾದಗೆ ಹೋಗುವ ಸಂದರ್ಭ ಒದಗಿ ಬಂತು. ಹುಮ್ನಾಬಾದಗೆ ಸಮೀಪ ಇರುವ ಚಿಟಗುಪ್ಪದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದ ಕಲ್ಯಾಣ ನಾಡಿನ ಶರಣ ಸಾಹಿತ್ಯ ಪರಿಷತ್ತಿಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಾ. ದೇ.ಜ.ಗೌಡರ ಮಾತುಗಳು ನನಗೆ ನೆನಪಾದವು. ಅರಿಕೇಸರಿ ಆಸ್ಥಾನದ ಕವಿ ಪಂಪ ತನ್ನ ಕಾವ್ಯದಲ್ಲಿ “ನೆನೆವುದೆನ್ನ ಮನಂ ಬನವಾಸಿ ದೇಶಮಂ” ಎನ್ನುವಂತೆಯೆ ಡಾ. ದೇ.ಜವರೇಗೌಡರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ “ಬಸವಾದಿ ಶರಣರ ವಚನಗಳನ್ನು ಓದಿದ ಮೇಲೆ ನನಗೆ ಮರು ಹುಟ್ಟಿನ ಬಗೆಗೆ ಯಾವುದೆ ನಂಬಿಕೆಗಳಿಲ್ಲ. ಆದರೆ ಆಕಸ್ಮಿಕವಾಗಿ ಹಾಗೇನಾದರೂ ಇದ್ದರೆ, ನಾನು ಮುಂದಿನ ಜನ್ಮದಲ್ಲಿ ಕಲ್ಯಾಣದ ಪರಿಸರದಲ್ಲಿ ಹುಟ್ಟುವಂತೆ ಮಾಡು ಎಂದು ಕೇಳಿಕೊಳ್ಳುತ್ತೇನೆ. ಮರಿ ದುಂಬಿ ಬೇಡ ಕನಿಷ್ಟ ಪಕ್ಷ ಮರಿ ಹಂದಿಯನ್ನಾಗಿಯಾದರೂ ಈ ಕಲ್ಯಾಣ ನಾಡಿನಲ್ಲಿ ಹುಟ್ಟಿಸು!” ಎಂದು ಸಾರ್ವಜನಿಕ ಸಭೆಯಲ್ಲಿಯೆ ಅವಲತ್ತುಕೊಳ್ಳುತ್ತಾರೆ.

ದೇ.ಜ.ಗೌಡರ ಈ ಮಾತುಗಳನ್ನು ನೆನಪಿಸುತ್ತಲೆ ಬಸವಾದಿ ಶರಣರು ಕಟ್ಟ ಬಯಸಿದ ಸಮಾಜದ ಕುರಿತು ನಾನು ಮುಕ್ತವಾಗಿ ಮನಬಿಚ್ಚಿ ಮಾತನಾಡಿದೆ.
ಗುರು ಉಪದೇಶ ಮಂತ್ರ ವೈದ್ಯ.
ಜಂಗಮ ಉಪದೇಶ ಶಸ್ತ್ರ ವೈದ್ಯ ನೋಡಾ,
ಭವರೋಗ ಕಳೆವ ಪರಿಯ ನೋಡಾ.
ಕೂಡಲಸಂಗನ ಶರಣರ ಅನುಭಾವ ಮಡಿವಾಳನ ಕಾಯಕದಂತೆ.

ಎಂಬ ಬಸವಣ್ಣನವರ ವಚನಗಳನ್ನು ಸಾಂದರ್ಭಿಕವಾಗಿ ಹೇಳುತ್ತ ಲಿಂಗಾಯತವೆಂಬುದು ಒಂದು ಜಾತಿ ಅಲ್ಲವೆ ಅಲ್ಲ. ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಸೂಳೆ ಸಂಕವ್ವೆ, ಕದಿರೆಯ ರೆಮ್ಮವ್ವ, ಒಕ್ಕಲಿಗ ಮುದ್ದಣ್ಣ, ಮಡಿವಾಳ ಮಾಚಿದೇವ, ಅಲ್ಲಮ ಹೀಗೆ 770 ಅಮರ ಗಣಂಗಳು ಕೂಡಿ ಕಟ್ಟಿದ ಸಂಸ್ಥೆ ಲಿಂಗಾಯತ ಎಂದು ಸಭೆಗೆ ವಿವರಿಸಿದೆ. ಇಷ್ಟಲಿಂಗ ಅರಿವಿನ ಕುರುಹು. ಆಚಾರದ ಪ್ರತೀಕ. ಲಿಂಗ ಕಟ್ಟಿಕೊಂಡ ಮೇಲೆ ಸಕಲ ಜೀವಾತ್ಮರಿಗೆ ಲೇಸಬಯಸುವವರಾಗಬೇಕು. ರಾಗ ದ್ವೇಷಗಳು ಇರಬಾರದು. ಗುಡಿ ಗುಂಡಾರ ಕಟ್ಟುವುದು ಮುಖ್ಯ ಅಲ್ಲವೇ ಅಲ್ಲ. ಗಂಟೆ ಶಂಖ ಜಾಗಟೆಗಳು ಅರ್ಥ ಕಳೆದುಕೊಂಡು ನಮ್ಮ ಆತ್ಮಸಾಕ್ಷಿಯ ಗಂಟೆ ನಿನದಿಸಬೇಕು. ಯಾವ ಶಾಸ್ತ್ರ ಪುರಾಣ ವೇದ ಆಗಮಗಳಿಗಿಂತ ಎದೆಯ ದನಿ ಬಹಳ ಪ್ರಮುಖವಾದುದು.

ಲಿಂಗವ ಪೂಜಿಸಿ ಫಲವೇನಯ್ಯಾ,
ಸಮರತಿ ಸಮಕಳೆ ಸಮ ಸುಖವನರಿಯದನ್ನಕ್ಕ
ಲಿಂಗವ ಪೂಜಿಸಿ ಫಲವೇನಯ್ಯಾ
ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ
ನದಿ ಬೆರಸಿದಂತಾಗದನ್ನಕ್ಕ

ಇಷ್ಟಲಿಂಗ ಕಟ್ಟಿಕೊಂಡೂ ಸ್ಥಾವರ ದೇವರಿಗೆ ಹೋಗುವುದೆಂದರೆ ಮಾಡಿಕೊಂಡು ಗಂಡನ ಬಿಟ್ಟು ಅನ್ಯ ಪುರುಷನತ್ತ ಹಾತೊರೆವಂತೆ ಎಂದು ತೀಕ್ಷ್ಣವಾಗಿ ನುಡಿದಾಗ ಹುಮ್ನಾಬಾದನ ಶಾಸಕ, ಗಣಿ ಮತ್ತು ಭೂಗರ್ಭ ಇಲಾಖೆಯ ಮಂತ್ರಿ ರಾಜಶೇಖರ ಪಾಟೀಲ ನನ್ನತ್ತ ಬೆಕ್ಕಸ ಬೆರರಾಗಿ ನೋಡಿದರು. ಕುಲ ಶ್ರೇಷ್ಠ ಎನ್ನುವುದು ಬ್ರಾಹ್ಮಣ್ಯ. ದುಡಿದು ಉಣ್ಣುವವನು ದೊಡ್ಡವನು. ಕಾಯಕದಲ್ಲಿ ದೊಡ್ಡದು ಸಣ್ಣದು ಎಂಬುದು ಇಲ್ಲವೇ ಇಲ್ಲ. ದಲಾಲಿಗಳಿಲ್ಲದ, ಸ್ಥಾವರ ದೇವರುಗಳನ್ನು ಗುಡಿಸಿ ಗುಂಡಾಂತರ ಹಾಕಿದ ಧರ್ಮ ಲಿಂಗಾಯತವೆಂದಾಗ ನನ್ನೊಂದಿಗೆ ವೇದಿಕೆಯಲ್ಲಿ ಕುಳಿತ ರಾಜಶೇಖರ ಪಾಟೀಲರಿಗೆ ಇರಿಸು ಮುರಿಸು. ಅವರು ಹುಟ್ಟಾ ಲಿಂಗಾಯತರಾಗಿದ್ದರು. ವೈದಿಕರ ಕಪಿಮುಷ್ಠಿಯಲ್ಲಿ ಸಿಲುಕಿದವರು. ಮಂತ್ರಿಯಾಗಿ ಪ್ರಮಾಣ ವಚನ ತೆಗೆದುಕೊಳ್ಳುವಾಗ ತಮ್ಮ ಊರಿನ ಸ್ಥಾವರ ದೇವರಾದ ವೀರಭದ್ರನ ಹೆಸರಿನ ಮೇಲೆ ವಿಶ್ವಾಸವಿರಿಸಿದವರು.

ಜಂಗಮ ಉಪದೇಶ ಶಸ್ತ್ರವೈದ್ಯ ಎಂಬಂತೆ ನನ್ನ ಮಾತು ಅವರ ಜಂಘಾಬಲವನ್ನು ಕುಗ್ಗಿಸಿತು. ಹೀಗಾಗಿ ನಾನು ಹೀಗೆ ಮಾತಾಡುತ್ತ ಹೋದರೆ ಕರ್ಮಠ ಲಿಂಗಾಯತರ ಒಳ ಹೂರಣವೆ ಬಯಲಾಗುತ್ತದೆ ಎಂಬ ದಿಗಿಲಿನಿಂದ ಸಂಘಟಕರಿಗೆ ನಾನು ಮಾತಾಡುವುದು ಸಾಕು ಮಾಡಲು ಚೀಟಿ ನೀಡಿ ಎಂದು ಸಂಜ್ಞೆ ಮಾಡಿದರಂತೆ. ಆದರೆ ಆಕಸ್ಮಿಕವಾಗಿ ಅದೇ ಸಮಯಕ್ಕೆ ಸರಿಯಾಗಿ ನಾನು ಸಹ : “ಹೇಳಿ ಕೇಳಿ ನಾನು ‘ಗೌರಿ ಲಂಕೇಶ್ ಪತ್ರಿಕೆಯ’ ವರದಿಗಾರನಾಗಿದ್ದೆ” ಎಂದು ಹೇಳಿದ್ದೆ ತಡ. ರಾಜಶೇಖರ ಪಾಟೀಲ ಇದನ್ನು ಗಮನಿಸಿ ಸಂಘಟಕರಿಗೆ ಮತ್ತೆ ಸೂಚಿಸಿ “ಸತ್ಯಂಪೇಟೆ ಮಾತಾಡಲಿ ಬಿಡಿ. ಆ ಪತ್ರಿಕೆಯವರು ಯಾರನ್ನೂ ಬಿಟ್ಟವರಲ್ಲ. ಅವರು ಸತ್ಯವನ್ನೇ ಹೇಳುತ್ತಾರೆ. ಸುಳ್ಳನ್ನಲ್ಲ !” ಎಂದು ಹೇಳಿದರಂತೆ.

ಹಾಗಾಗಿ ನಾನು ನಿರರ್ಗಳವಾಗಿ ತಾಸೊತ್ತು ಮಾತನಾಡಿದೆ. ಮಡಿವಾಳನ ಕಾಯಕವನ್ನು ಮಾಡಿದೆ. ನನ್ನ ಮಾತು ಅಧರಕ್ಕೆ ಕಹಿ ಅನಿಸಿದರೂ , ಉದರಕ್ಕೆ ಸಿಹಿ ಉಂಟು ಮಾಡುವಂತಹವಾಗಿದ್ದವು. ಮಾತು ಮುಗಿಸಿ ವೇದಿಕೆಯಲ್ಲಿ ಕುಳಿತಾಗ ಮಂತ್ರಿಗಳು ಮನಬಿಚ್ಚಿ ನನ್ನೊಂದಿಗೆ ಬೆರೆತರು. ಗೌರಿ ಲಂಕೇಶ್ ದೈಹಿಕವಾಗಿ ಈಗ ನಮ್ಮೊಂದಿಗೆ ಇಲ್ಲದಿದ್ದರೂ ಸಹ ಅವರ ಗಟ್ಟಿ ನಿಲುವು. ಅವರ ಮಾರ್ಗ ಬಸವ ಮಾರ್ಗ ಎಂಬುದು ನನಗೆ ಮನದಟ್ಟಾಗಿ ತುಂಬಾ ಖುಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...