Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...