Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...