Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...