Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...