Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...