Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...