Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...