Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...