Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...