Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....