Homeಮುಖಪುಟರಣರಂಗವಾದ ಪಶ್ಚಿಮ ಬಂಗಾಳ ವಿಧಾನಸಭೆ: ಶಾಸಕರ ಹೊಡೆದಾಟ

ರಣರಂಗವಾದ ಪಶ್ಚಿಮ ಬಂಗಾಳ ವಿಧಾನಸಭೆ: ಶಾಸಕರ ಹೊಡೆದಾಟ

ಗಲಾಟೆಯ ನಂತರ ಸುವೇಂದು ಅಧಿಕಾರಿ ಮತ್ತು ಇತರ ನಾಲ್ವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಕೋಲ್ಕತ್ತಾ: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸದನದಲ್ಲಿ ಮಾತನಾಡಬೇಕು ಎಂದು ಬಿಜೆಪಿ ಒತ್ತಾಯಿಸಿದ ನಂತರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ಶಾಸಕರು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಹೊಡೆದಾಡಿಕೊಂಡಿದ್ದಾರೆ.

ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ನಡೆದ ಭೀಕರ ಹತ್ಯೆಗಳ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿದೆ. ಐದು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರ ಮೇಲೆ ಹಲ್ಲೆ ನಡೆಸಿ ನಂತರ ಕೊಲ್ಲಲಾಗಿದೆ.

ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಭಾದು ಶೇಖ್ ಅವರು ಕಚ್ಚಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ ಈ ಘಟನೆಯು ನಡೆದಿದೆ ಎಂದು ಆರೋಪಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್ ಮಧ್ಯಪ್ರವೇಶದ ನಂತರ, ಸಿಬಿಐ ಘಟನೆಯ ಕುರಿತು ತನಿಖೆ ನಡೆಸುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಮತ್ತು ವಕ್ತಾರ ಶೆಹಜಾದ್ ಜೈ ಹಿಂದ್ ಸೇರಿದಂತೆ ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದು ಜನಪ್ರತಿನಿಧಿಗಳು ಜಗಳವಾಡುತ್ತಿರುವುದನ್ನು ಕಾಣಬಹುದು.

ಜಗಳದಲ್ಲಿ ತೃಣಮೂಲ ಶಾಸಕ ಅಸಿತ್ ಮಜುಂದಾರ್ ಅವರ ಮೂಗಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿದ್ದಾರೆ, ವಿರೋಧ ಪಕ್ಷದ ನಾಯಕ ಬಿಜೆಪಿಯ ಸುವೇಂದು ಅಧಿಕಾರಿಯವರು ಮಜುಂದಾರ್‌ರಿಗೆ ಗುದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಗಲಾಟೆಯ ನಂತರ ಸುವೇಂದು ಅಧಿಕಾರಿ ಮತ್ತು ಇತರ ನಾಲ್ವರು ಬಿಜೆಪಿ ಶಾಸಕರನ್ನು ಈ ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ.

“ಪ್ರತಿಪಕ್ಷಗಳು ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ಒತ್ತಾಯಿಸಿದವು. ಆದರೆ ಸರ್ಕಾರ ನಿರಾಕರಿಸಿತು. ಅವರು ನಮ್ಮ ಶಾಸಕರೊಂದಿಗೆ ಘರ್ಷಣೆಗಾಗಿ ಸಿವಿಲ್ ಡ್ರೆಸ್‌ನಲ್ಲಿ ಕೋಲ್ಕತ್ತಾ ಪೊಲೀಸ್ ಸಿಬ್ಬಂದಿಯನ್ನು ಕರೆತಂದರು” ಎಂದು  ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ವಿಧಾನಸಭೆಯೊಳಗೆ ಶಾಸಕರು ಸುರಕ್ಷಿತವಾಗಿಲ್ಲ. ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ ನಮ್ಮ 8-10 ಶಾಸಕರನ್ನು ಕೆಲವು ಟಿಎಂಸಿ ಶಾಸಕರು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಆದರೆ ತೃಣಮೂಲ ನಾಯಕ ಮತ್ತು ರಾಜ್ಯ ಸಚಿವ ಫಿರ್ಹಾದ್ ಹಕೀಮ್ ಬಿಜೆಪಿ ಮೇಲೆ ಆರೋಪ ಹೊರಿಸಿದ್ದಾರೆ. ಸದನದೊಳಗೆ ನಮ್ಮ ಕೆಲವು ಶಾಸಕರು ಗಾಯಗೊಂಡಿದ್ದಾರೆ, ಬಿಜೆಪಿಯ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.


ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...