Homeಕರ್ನಾಟಕಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

- Advertisement -
- Advertisement -

ಶಾಸಕ ಹೆಚ್‌ಡಿ ರೇವಣ್ಣ ಅವರ ಪತ್ನಿ, ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಸಾಲಿಗ್ರಾಮದ ಬಳಿ ಬೈಕೊಂದು ಢಿಕ್ಕಿ ಹೊಡೆದಿದೆ. ಘಟನೆ ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದು, ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ಕಾರಿಗೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಶಿವಣ್ಣ ಎಂಬಾತನ ಬೈಕ್‌ ಢಿಕ್ಕಿ ಹೊಡೆದಿದೆ. ಘಟನೆ ಆಕಸ್ಮಿಕವಾಗಿದೆ ಆದರೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಅವಾಚ್ಯವಾಗಿ ನಿಂದಿಸಿದ್ದಾರೆ.

ಬೋರ್ಡ್‌ ಎಲ್ಲಾ ಸಖತ್ ಡ್ಯಾಮೇಜ್‌ ಆಗಿದೆ, ಎಲ್ಲಿಗೆ ನುಗ್ಗಿಸ್ತೀಯಾ ಸುಟ್ಟ ಹಾಕ್ರೋ…. ಈ ಗಾಡಿ ಎಷ್ಟು ಡ್ಯಾಮೇಜ್‌ ಆಗಿದೆ, ಹೆಂಗೆ ರೆಡಿ ಮಾಡ್ಸೋದು? ಎಲ್ಲಾ ಹೋಗಿದೆ, ನೀನ್ ಫೋನ್ ತಗೋಬೇಡ, ನಡಿ ಆಚೆಗೆ ಯಾವನು ಸೀಝ್ ಮಾಡಿ ಗಾಡಿ. ಅವನಿಗೆ ಬೈಕ್ ಮುಟ್ಟಬೇಡ ಅಂತ ಹೇಳು. ಸಾಲಿಗ್ರಾಮ ಎಸ್‌ಐ ಬರಲು ಹೇಳು. ಒಂದುವರೆ ಕೋಟಿ ರೂಪಾಯಿ ಗಾಡಿ ಅದು, ಅದನ್ನು ಡ್ಯಾಮೇಜ್ ಮಾಡಿ ಬಿಟ್ಟಿದ್ದಾನೆ. ಏನ್ ಅರ್ಜೆಂಟ್ ಇತ್ತು? ಏನ್ ದೇಶ ಮುಳುಗಿ ಹೋಗಿತ್ತಾ ಎಂದೆಲ್ಲಾ ಹಿಗ್ಗಾ ಮುಗ್ಗ ನಿಂದಿಸಿದ್ದಾರೆ.

ಈ ವೇಳೆ ಅಕ್ಕ ಗಾಡಿ ತೆಗೀರಿ, ಹೋಗೋಣ ಎಂದು ಸ್ಥಳದಲ್ಲಿ ಇದ್ದವರು ಹೇಳಿದ್ದು, ಅದಕ್ಕೆ ಗಾಡಿ ತಗಂಡು ಏನ್ ಮಾಡೋಣ? ಕೊಡ್ತಿಯಾ 50 ಲಕ್ಷ ರಿಪೇರಿ ಮಾಡ್ಲಿಕೆ ಎಂದು ಅವರನ್ನೇ ಪ್ರಶ್ನಿಸಿದ್ದಾರೆ. ನಿಂತಿದ್ದವರು ದುಡ್ಡು ಕೊಡುವ ಹಾಗಿದ್ದರೆ ನ್ಯಾಯ ಮಾತನಾಡಲು ಬನ್ನಿ ಎಂದು ಬೈದಾಡಿದ್ದಾರೆ.

ಒಂದುವರೆ ಕೋಟಿ ರೂಪಾಯಿ ಗಾಡಿ, ಬೋರ್ಡ್ ಎಲ್ಲಾ ಏನು ಇಲ್ಲ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್‌ಗೆ ಸಿಗಾಕಂಡು, ನನ್ನ ಕಾರು ಡ್ಯಾಮೇಜ್ ಮಾಡಕೆ ನೀನ್ ಯಾವನು? ಒಂದುವರೆ ಕೋಟಿ ರೂಪಾಯಿ ಡ್ಯಾಮೇಜ್ ಯಾವನ್ ಕಟ್ಟೋನು? ಎಂದು ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ನಿಂದಿಸಿದ್ದಾರೆ.

ಬೈಕ್ ಸವಾರನ ವಿರುದ್ಧ ದೂರು

ಭವಾನಿ ರೇವಣ್ಣ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ದೂರು ದಾಖಲಾಗಿದೆ. ಬೈಕ್ ಸವಾರ ಶಿವಣ್ಣ ಎಂಬಾತನ ಮೇಲೆ ಭವಾನಿ ಕಾರು ಚಾಲಕ ಮಂಜುನಾಥ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬೈಕ್ ಸವಾರನ ಮೇಲೆ ಸಿಆರ್‌ಪಿಸಿ ಸೆಕ್ಷನ್ 157 ರಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಭವಾನಿ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಭವಾನಿ ರೇವಣ್ಣ ಬೈಕ್‌ ಚಾಲಕನಿಗೆ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಬಳಕೆದಾರರು ಭವಾನಿ ರೇವಣ್ಣ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕ ಬೈಕ್‌ ಸವಾರನ ಆರೋಗ್ಯ ವಿಚಾರಿಸದೆ ಭವಾನಿ ತಮ್ಮ ಕಾರಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ದುರಹಂಕಾರ ಎಂದು  ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದು, ಆಕಸ್ಮಿಕವಾಗಿ ನಡೆಯುವ ಘಟನೆಗೆ ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ವಾಹನಕ್ಕೆ ವಿಮೆ ಕ್ಲೈಮ್‌ ಮಾಡಬಹುದು. ಬೈಕ್‌ ಸವಾರನ ಪ್ರಾಣಕ್ಕೆ ಏನಾದರೂ ಆದರೆ ಯಾರು ಹೊಣೆ? ಅಹಂಕಾರದ ಮಾತುಗಳನ್ನು ಸ್ವಲ್ಲ ಕಡಿಮೆ ಮಾಡಿ ಎಂದು ಬರೆದುಕೊಂಡಿದ್ದಾರೆ.

ಅವ್ಯಾಚ ಪದಗಳನ್ನು ಬಳಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಕೆಲವರು, ಬಡವ ಸತ್ರೂ ಇವರಿಗೆ ಚಿಂತೆ ಇಲ್ಲ. ಆದರೆ ಇವರ ಒಂದೂವರೆ ಕೋಟಿ ಕಾರಿಗೆ ಏನು ಆಗಬಾರದು, ದೊಡ್ಡ ಗೌಡರ ಮನೆಗೆ ದೊಡ್ಡತನ ನೋಡಿ,  ಅಕ್ಕೋ ಸಮಾಧಾನ ಮಾಡ್ಕೊಳಿ ಎಂದೆಲ್ಲಾ ನೆಟ್ಟಿಗರು ಬರೆದುಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ರಾ.ಚಿಂತನ್‌, ಸಾಲಿಗ್ರಾಮದ ಬಳಿ ಬಡ ಬೈಕ್ ಸವಾರ ತಮ್ಮ ಕಾರಿಗೆ ಆಕಸ್ಮಿಕವಾಗಿ ಗುದ್ದಿದ್ದಕ್ಕೆ ಭವಾನಿ ರೇವಣ್ಣ ಅವರ ಪ್ರತಿಕ್ರಿಯೆ ಇದು. ಬಡವ ನೀನು ಬೇಕಾದ್ರೆ ಸಾಯಿ, ನನ್ನ ಕಾರು ಡ್ಯಾಮೇಜ್ ಆಗಿದ್ದು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಿದ ಇವರು ರೈತ ನಾಯಕ, ಮಣ್ಣಿನ ಮಗ ದೇವೇಗೌಡರ ಸೊಸೆ. ಶಾಸಕ ರೇವಣ್ಣ ಅವರ ಪತ್ನಿ, ಸಂಸದ ಪ್ರಜ್ವಲ್ ಅವರ ತಾಯಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅತ್ತಿಗೆ!

ಅಂದಹಾಗೆ, ಈ ದುಬಾರಿ ಕಾರಿನ ಸ್ಕ್ರಾಚ್ ರಿಪೇರಿಗೆ ಒಂದೆರಡು ಲಕ್ಷ ಖರ್ಚುಗಬಹುದೇನೋ… ಆ ಹಣ ಗೌಡರ ಕುಟುಂಬಕ್ಕೆ ಒಂದು ದಿನದ ಟೀ ಖರ್ಚಿಗಿಂತ ಕಡಿಮೆ. ಆದರೆ ಆ ಬಡ ರೈತ ತನ್ನ ಬೈಕ್ ರಿಪೇರಿ ಮಾಡಿಸಲು ಸಾಲ ಮಾಡಬೇಕು. ಅವನು ಸತ್ತಿದ್ದರೆ ಕುಟುಂಬ ಬೀದಿಗೆ ಬೀಳಬೇಕಿತ್ತು!

“ಬಡವ ನೀನು ಸತ್ತರೆ ಸಾಯಿ, ನನ್ನ ಕಾರು ನನಗೆ ಮುಖ್ಯ…” ಎಂಬ ಅಮೂಲ್ಯವಾದ ಸಂದೇಶ ಸಾರಿದ… ಭವಾನಿ ರೇವಣ್ಣ ಅವ್ರೇ.. So beautiful, so elegant, just looking like a wow’

ಅದೆಲ್ಲಾ ಇರ್ಲಿ… ನಿಮ್ಮ ಕಾರಿಗೆ ನಂಬರ್ ಪ್ಲೇಟ್ ಯಾಕಿಲ್ಲ ಮೇಡಂ? tinted glass ಬೇರೆ Heavy Dark ಇದೆ! ಅಲ್ಲಿಗೆ ಬಂದ ಪೊಲೀಸರು ಕೇಸ್ ಏನಾದ್ರೂ ಹಾಕಿದ್ರಾ? ಇಲ್ವಾ? ಎಂದು ಪೋಸ್ಟ್‌ ಮಾಡಿದ್ದಾರೆ.

ಇನ್ನೋರ್ವ ಫೇಸ್ಬುಕ್‌ ಬಳಕೆದಾರರಾದ ಮಂಜುನಾಥ ಗೌಡ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಬಡವ ಬೇಕಿದ್ದರೆ ಸತ್ತರೆ ಸಾಯಬಹುದು ಆದರೆ ಭವಾನಿ ರೇವಣ್ಣ ಅವರ ಒಂದೂವರೆ ಕೋಟಿಯ ಕಾರಿಗೆ ಮಾತ್ರ ಯಾವುದೇ ಡ್ಯಾಮೇಜ್ ಆಗಬಾರದು ಅಷ್ಟೇ….

ಬಡವರ ಬಗ್ಗೆ ಉದ್ದುದ್ದ ಬೊಗಳೆ ಬಿಡುವ H D Kumaraswamy ಅವರು ತಮ್ಮ ಅತ್ತಿಗೆಯವರ ಈ ಮುತ್ತಿನಂಥ ಮಾತುಗಳ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ದಿನೇಶ್‌ ದೊಡ್ಡಮನೆ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಒಂದೂವರೆ ಕೋಟಿ ಕಾರು, ಮೈ ತುಂಬಾ ಬಂಗಾರ, ಹತ್ತು ತಲೆ ಮಾರು ಕೂತು ತಿಂದರೂ ಕರಗದ ಆಸ್ತಿ, ಮಾವ ಮಾಜಿ ಪ್ರಧಾನಿ, ಮೈದುನ ಮಾಜಿ ಸಿಎಂ, ಗಂಡ ಮಾಜಿ ಸಚಿವ, ನಾದಿನಿ ಮಾಜಿ ಶಾಸಕಿ, ಒಬ್ಬ ಮಗ ಎಂಪಿ, ಇನ್ನೊಬ್ಬ ಮಗ ಎಂಎಲ್ಸಿ, ಇನ್ನೂ ನೀವು ಜಿಪಂ ಮಾಜಿ ಅಧ್ಯಕ್ಷರು ಇಷ್ಟೆಲ್ಲಾ ಇರುವ ನಿಮಗೆ ಅಹಂಕಾರ, ದುರಹಂಕಾರ ಸರ್ವೇ ಸಾಮಾನ್ಯ ಬಿಡಿ…
ಒಬ್ಬ ವ್ಯಕ್ತಿಯ ಜೀವಕ್ಕಿಂತ ನಿನ್ನ ಒಂದೂವರೆ ಕೋಟಿ ಕಾರಿನ 150 ರೂಪಾಯಿ ನಂಬರ್ ಪ್ಲೇಟ್ ಹೆಚ್ಚಾಯಿತಲ್ಲ ತಾಯಿ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್ಸಿಗೆ ಏನಾದ್ರೂ ಸಿಕ್ಕಾಕೊಂಡು, ನನ್ನ ಕಾರ್ ಬೇಕಿತ್ತಾ, ನನ್ನ 1.5 ಕೋಟಿ ರೂಪಾಯಿ ಕಾರಿನ ನಂಬರ್ ಪ್ಲೇಟ್ ಹಾಳು ಮಾಡಿ ಬಿಟ್ಟಲ್ಲ,  ಇದು ದರ್ಪದ, ದುರಹಂಕಾರದ ಮಾತು ಮಾತ್ರವಲ್ಲ ಶ್ರೀಮಂತಿಕೆಯ ಮದ ಕೂಡ ತಲೆಗೆ ಹತ್ತಿದೆ ಎಂದರೆ ತಪ್ಪಾಗಲಾರದು, ಬಡವರನ್ನು ಜನ ಸಾಮಾನ್ಯರನ್ನು ನೀವುಗಳು ಕಾಣುವ ಪರಿ ಇದು. ನಿಮ್ಮಂತವರನ್ನು ನೋಡ್ತಾ ಇದ್ರೆ ಫ್ರಾನ್ಸಿನ ಲೂಯಿ ದೊರೆಗಳು ನೆನಪಾಗಗಾದೇ ಇರರು. ಬಹುಶಃ ಅಪಘಾತದಲ್ಲಿ ಭಾಗಿಯಾದ ವ್ಯಕ್ತಿ ಕೂಡ ಆಕೆಯ ಹಿಂಬಾಲಕ ಆಗಿದ್ದರು ಆಗಿರಬಹುದು ಮತ್ತೆ ಚುನಾವಣೆ ಬಂದಾಗ ಅದೇ ವ್ಯಕ್ತಿಗೆ ಇಂದಿನ ಅವಮಾನ ಮರೆತು ವೋಟ್ ಹಾಕುವುದರಲ್ಲಿ ಅನುಮಾನ ಕೂಡ ಇಲ್ಲ ಅಥವಾ ನಾಳೆ ಮಾದ್ಯಮದ ಮುಂದೆ ಅಮ್ಮವರು ಹಾಗೆ ಹೇಳಿಲ್ಲ ನನ್ನದೇ ತಪ್ಪು ಎನ್ನುವ ಹೇಳಿಕೆ ನೀಡಲೂಬಹುದು. ಆದ್ರೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ..?
ಜನ ಸಾಮಾನ್ಯರಾದ ನಾವುಗಳು ವಿಚಾರ ಮಾಡುವುದು ಬಹಳಷ್ಟಿದೆ ನನ್ನದು ಆ ಪಕ್ಷ ನನ್ನದು ಈ ಪಕ್ಷ ಅಂತ ಕಿತ್ತಾಡ್ತಾ ಇರುತ್ತೇವೆ ಹೊರತು ಇಂಥ ವಿಚಾರಗಳನ್ನು ಧೈರ್ಯವಾಗಿ ಖಂಡಿಸುವುದು ಇಲ್ಲ, ಇಂಥವರ ವಿರುದ್ಧ ಯೋಗ್ಯರನ್ನು ಆಯ್ಕೆ ಮಾಡುವುದು ಇಲ್ಲ ಎಂದು ಬರೆದುಕೊಂಡಿದ್ದಾರೆ.

https://m.facebook.com/story.php?story_fbid=pfbid02rriCzFnZ2TUQAuPfb2SFTJTDp5eRCP1rWV5UkDqhT5ZGtdcAuFLjAgUKZUVuDq8vl&id=100011214451587&mibextid=RtaFA8

 

https://m.facebook.com/story.php?story_fbid=pfbid021eiv9wJDwgYiK5PwRB9p6J3UPsC5DNpE23wf3dW2Xmsh58yPgMVbU2nKpCL2vUF9l&id=100002096847608&mibextid=RtaFA8

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...