Homeಕರ್ನಾಟಕಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

- Advertisement -
- Advertisement -

ಶಾಸಕ ಹೆಚ್‌ಡಿ ರೇವಣ್ಣ ಅವರ ಪತ್ನಿ, ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಸಾಲಿಗ್ರಾಮದ ಬಳಿ ಬೈಕೊಂದು ಢಿಕ್ಕಿ ಹೊಡೆದಿದೆ. ಘಟನೆ ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದು, ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ಕಾರಿಗೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಶಿವಣ್ಣ ಎಂಬಾತನ ಬೈಕ್‌ ಢಿಕ್ಕಿ ಹೊಡೆದಿದೆ. ಘಟನೆ ಆಕಸ್ಮಿಕವಾಗಿದೆ ಆದರೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಅವಾಚ್ಯವಾಗಿ ನಿಂದಿಸಿದ್ದಾರೆ.

ಬೋರ್ಡ್‌ ಎಲ್ಲಾ ಸಖತ್ ಡ್ಯಾಮೇಜ್‌ ಆಗಿದೆ, ಎಲ್ಲಿಗೆ ನುಗ್ಗಿಸ್ತೀಯಾ ಸುಟ್ಟ ಹಾಕ್ರೋ…. ಈ ಗಾಡಿ ಎಷ್ಟು ಡ್ಯಾಮೇಜ್‌ ಆಗಿದೆ, ಹೆಂಗೆ ರೆಡಿ ಮಾಡ್ಸೋದು? ಎಲ್ಲಾ ಹೋಗಿದೆ, ನೀನ್ ಫೋನ್ ತಗೋಬೇಡ, ನಡಿ ಆಚೆಗೆ ಯಾವನು ಸೀಝ್ ಮಾಡಿ ಗಾಡಿ. ಅವನಿಗೆ ಬೈಕ್ ಮುಟ್ಟಬೇಡ ಅಂತ ಹೇಳು. ಸಾಲಿಗ್ರಾಮ ಎಸ್‌ಐ ಬರಲು ಹೇಳು. ಒಂದುವರೆ ಕೋಟಿ ರೂಪಾಯಿ ಗಾಡಿ ಅದು, ಅದನ್ನು ಡ್ಯಾಮೇಜ್ ಮಾಡಿ ಬಿಟ್ಟಿದ್ದಾನೆ. ಏನ್ ಅರ್ಜೆಂಟ್ ಇತ್ತು? ಏನ್ ದೇಶ ಮುಳುಗಿ ಹೋಗಿತ್ತಾ ಎಂದೆಲ್ಲಾ ಹಿಗ್ಗಾ ಮುಗ್ಗ ನಿಂದಿಸಿದ್ದಾರೆ.

ಈ ವೇಳೆ ಅಕ್ಕ ಗಾಡಿ ತೆಗೀರಿ, ಹೋಗೋಣ ಎಂದು ಸ್ಥಳದಲ್ಲಿ ಇದ್ದವರು ಹೇಳಿದ್ದು, ಅದಕ್ಕೆ ಗಾಡಿ ತಗಂಡು ಏನ್ ಮಾಡೋಣ? ಕೊಡ್ತಿಯಾ 50 ಲಕ್ಷ ರಿಪೇರಿ ಮಾಡ್ಲಿಕೆ ಎಂದು ಅವರನ್ನೇ ಪ್ರಶ್ನಿಸಿದ್ದಾರೆ. ನಿಂತಿದ್ದವರು ದುಡ್ಡು ಕೊಡುವ ಹಾಗಿದ್ದರೆ ನ್ಯಾಯ ಮಾತನಾಡಲು ಬನ್ನಿ ಎಂದು ಬೈದಾಡಿದ್ದಾರೆ.

ಒಂದುವರೆ ಕೋಟಿ ರೂಪಾಯಿ ಗಾಡಿ, ಬೋರ್ಡ್ ಎಲ್ಲಾ ಏನು ಇಲ್ಲ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್‌ಗೆ ಸಿಗಾಕಂಡು, ನನ್ನ ಕಾರು ಡ್ಯಾಮೇಜ್ ಮಾಡಕೆ ನೀನ್ ಯಾವನು? ಒಂದುವರೆ ಕೋಟಿ ರೂಪಾಯಿ ಡ್ಯಾಮೇಜ್ ಯಾವನ್ ಕಟ್ಟೋನು? ಎಂದು ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ನಿಂದಿಸಿದ್ದಾರೆ.

ಬೈಕ್ ಸವಾರನ ವಿರುದ್ಧ ದೂರು

ಭವಾನಿ ರೇವಣ್ಣ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ದೂರು ದಾಖಲಾಗಿದೆ. ಬೈಕ್ ಸವಾರ ಶಿವಣ್ಣ ಎಂಬಾತನ ಮೇಲೆ ಭವಾನಿ ಕಾರು ಚಾಲಕ ಮಂಜುನಾಥ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬೈಕ್ ಸವಾರನ ಮೇಲೆ ಸಿಆರ್‌ಪಿಸಿ ಸೆಕ್ಷನ್ 157 ರಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಭವಾನಿ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಭವಾನಿ ರೇವಣ್ಣ ಬೈಕ್‌ ಚಾಲಕನಿಗೆ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಬಳಕೆದಾರರು ಭವಾನಿ ರೇವಣ್ಣ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕ ಬೈಕ್‌ ಸವಾರನ ಆರೋಗ್ಯ ವಿಚಾರಿಸದೆ ಭವಾನಿ ತಮ್ಮ ಕಾರಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ದುರಹಂಕಾರ ಎಂದು  ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದು, ಆಕಸ್ಮಿಕವಾಗಿ ನಡೆಯುವ ಘಟನೆಗೆ ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ವಾಹನಕ್ಕೆ ವಿಮೆ ಕ್ಲೈಮ್‌ ಮಾಡಬಹುದು. ಬೈಕ್‌ ಸವಾರನ ಪ್ರಾಣಕ್ಕೆ ಏನಾದರೂ ಆದರೆ ಯಾರು ಹೊಣೆ? ಅಹಂಕಾರದ ಮಾತುಗಳನ್ನು ಸ್ವಲ್ಲ ಕಡಿಮೆ ಮಾಡಿ ಎಂದು ಬರೆದುಕೊಂಡಿದ್ದಾರೆ.

ಅವ್ಯಾಚ ಪದಗಳನ್ನು ಬಳಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಕೆಲವರು, ಬಡವ ಸತ್ರೂ ಇವರಿಗೆ ಚಿಂತೆ ಇಲ್ಲ. ಆದರೆ ಇವರ ಒಂದೂವರೆ ಕೋಟಿ ಕಾರಿಗೆ ಏನು ಆಗಬಾರದು, ದೊಡ್ಡ ಗೌಡರ ಮನೆಗೆ ದೊಡ್ಡತನ ನೋಡಿ,  ಅಕ್ಕೋ ಸಮಾಧಾನ ಮಾಡ್ಕೊಳಿ ಎಂದೆಲ್ಲಾ ನೆಟ್ಟಿಗರು ಬರೆದುಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ರಾ.ಚಿಂತನ್‌, ಸಾಲಿಗ್ರಾಮದ ಬಳಿ ಬಡ ಬೈಕ್ ಸವಾರ ತಮ್ಮ ಕಾರಿಗೆ ಆಕಸ್ಮಿಕವಾಗಿ ಗುದ್ದಿದ್ದಕ್ಕೆ ಭವಾನಿ ರೇವಣ್ಣ ಅವರ ಪ್ರತಿಕ್ರಿಯೆ ಇದು. ಬಡವ ನೀನು ಬೇಕಾದ್ರೆ ಸಾಯಿ, ನನ್ನ ಕಾರು ಡ್ಯಾಮೇಜ್ ಆಗಿದ್ದು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಿದ ಇವರು ರೈತ ನಾಯಕ, ಮಣ್ಣಿನ ಮಗ ದೇವೇಗೌಡರ ಸೊಸೆ. ಶಾಸಕ ರೇವಣ್ಣ ಅವರ ಪತ್ನಿ, ಸಂಸದ ಪ್ರಜ್ವಲ್ ಅವರ ತಾಯಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅತ್ತಿಗೆ!

ಅಂದಹಾಗೆ, ಈ ದುಬಾರಿ ಕಾರಿನ ಸ್ಕ್ರಾಚ್ ರಿಪೇರಿಗೆ ಒಂದೆರಡು ಲಕ್ಷ ಖರ್ಚುಗಬಹುದೇನೋ… ಆ ಹಣ ಗೌಡರ ಕುಟುಂಬಕ್ಕೆ ಒಂದು ದಿನದ ಟೀ ಖರ್ಚಿಗಿಂತ ಕಡಿಮೆ. ಆದರೆ ಆ ಬಡ ರೈತ ತನ್ನ ಬೈಕ್ ರಿಪೇರಿ ಮಾಡಿಸಲು ಸಾಲ ಮಾಡಬೇಕು. ಅವನು ಸತ್ತಿದ್ದರೆ ಕುಟುಂಬ ಬೀದಿಗೆ ಬೀಳಬೇಕಿತ್ತು!

“ಬಡವ ನೀನು ಸತ್ತರೆ ಸಾಯಿ, ನನ್ನ ಕಾರು ನನಗೆ ಮುಖ್ಯ…” ಎಂಬ ಅಮೂಲ್ಯವಾದ ಸಂದೇಶ ಸಾರಿದ… ಭವಾನಿ ರೇವಣ್ಣ ಅವ್ರೇ.. So beautiful, so elegant, just looking like a wow’

ಅದೆಲ್ಲಾ ಇರ್ಲಿ… ನಿಮ್ಮ ಕಾರಿಗೆ ನಂಬರ್ ಪ್ಲೇಟ್ ಯಾಕಿಲ್ಲ ಮೇಡಂ? tinted glass ಬೇರೆ Heavy Dark ಇದೆ! ಅಲ್ಲಿಗೆ ಬಂದ ಪೊಲೀಸರು ಕೇಸ್ ಏನಾದ್ರೂ ಹಾಕಿದ್ರಾ? ಇಲ್ವಾ? ಎಂದು ಪೋಸ್ಟ್‌ ಮಾಡಿದ್ದಾರೆ.

ಇನ್ನೋರ್ವ ಫೇಸ್ಬುಕ್‌ ಬಳಕೆದಾರರಾದ ಮಂಜುನಾಥ ಗೌಡ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಬಡವ ಬೇಕಿದ್ದರೆ ಸತ್ತರೆ ಸಾಯಬಹುದು ಆದರೆ ಭವಾನಿ ರೇವಣ್ಣ ಅವರ ಒಂದೂವರೆ ಕೋಟಿಯ ಕಾರಿಗೆ ಮಾತ್ರ ಯಾವುದೇ ಡ್ಯಾಮೇಜ್ ಆಗಬಾರದು ಅಷ್ಟೇ….

ಬಡವರ ಬಗ್ಗೆ ಉದ್ದುದ್ದ ಬೊಗಳೆ ಬಿಡುವ H D Kumaraswamy ಅವರು ತಮ್ಮ ಅತ್ತಿಗೆಯವರ ಈ ಮುತ್ತಿನಂಥ ಮಾತುಗಳ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ದಿನೇಶ್‌ ದೊಡ್ಡಮನೆ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಒಂದೂವರೆ ಕೋಟಿ ಕಾರು, ಮೈ ತುಂಬಾ ಬಂಗಾರ, ಹತ್ತು ತಲೆ ಮಾರು ಕೂತು ತಿಂದರೂ ಕರಗದ ಆಸ್ತಿ, ಮಾವ ಮಾಜಿ ಪ್ರಧಾನಿ, ಮೈದುನ ಮಾಜಿ ಸಿಎಂ, ಗಂಡ ಮಾಜಿ ಸಚಿವ, ನಾದಿನಿ ಮಾಜಿ ಶಾಸಕಿ, ಒಬ್ಬ ಮಗ ಎಂಪಿ, ಇನ್ನೊಬ್ಬ ಮಗ ಎಂಎಲ್ಸಿ, ಇನ್ನೂ ನೀವು ಜಿಪಂ ಮಾಜಿ ಅಧ್ಯಕ್ಷರು ಇಷ್ಟೆಲ್ಲಾ ಇರುವ ನಿಮಗೆ ಅಹಂಕಾರ, ದುರಹಂಕಾರ ಸರ್ವೇ ಸಾಮಾನ್ಯ ಬಿಡಿ…
ಒಬ್ಬ ವ್ಯಕ್ತಿಯ ಜೀವಕ್ಕಿಂತ ನಿನ್ನ ಒಂದೂವರೆ ಕೋಟಿ ಕಾರಿನ 150 ರೂಪಾಯಿ ನಂಬರ್ ಪ್ಲೇಟ್ ಹೆಚ್ಚಾಯಿತಲ್ಲ ತಾಯಿ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್ಸಿಗೆ ಏನಾದ್ರೂ ಸಿಕ್ಕಾಕೊಂಡು, ನನ್ನ ಕಾರ್ ಬೇಕಿತ್ತಾ, ನನ್ನ 1.5 ಕೋಟಿ ರೂಪಾಯಿ ಕಾರಿನ ನಂಬರ್ ಪ್ಲೇಟ್ ಹಾಳು ಮಾಡಿ ಬಿಟ್ಟಲ್ಲ,  ಇದು ದರ್ಪದ, ದುರಹಂಕಾರದ ಮಾತು ಮಾತ್ರವಲ್ಲ ಶ್ರೀಮಂತಿಕೆಯ ಮದ ಕೂಡ ತಲೆಗೆ ಹತ್ತಿದೆ ಎಂದರೆ ತಪ್ಪಾಗಲಾರದು, ಬಡವರನ್ನು ಜನ ಸಾಮಾನ್ಯರನ್ನು ನೀವುಗಳು ಕಾಣುವ ಪರಿ ಇದು. ನಿಮ್ಮಂತವರನ್ನು ನೋಡ್ತಾ ಇದ್ರೆ ಫ್ರಾನ್ಸಿನ ಲೂಯಿ ದೊರೆಗಳು ನೆನಪಾಗಗಾದೇ ಇರರು. ಬಹುಶಃ ಅಪಘಾತದಲ್ಲಿ ಭಾಗಿಯಾದ ವ್ಯಕ್ತಿ ಕೂಡ ಆಕೆಯ ಹಿಂಬಾಲಕ ಆಗಿದ್ದರು ಆಗಿರಬಹುದು ಮತ್ತೆ ಚುನಾವಣೆ ಬಂದಾಗ ಅದೇ ವ್ಯಕ್ತಿಗೆ ಇಂದಿನ ಅವಮಾನ ಮರೆತು ವೋಟ್ ಹಾಕುವುದರಲ್ಲಿ ಅನುಮಾನ ಕೂಡ ಇಲ್ಲ ಅಥವಾ ನಾಳೆ ಮಾದ್ಯಮದ ಮುಂದೆ ಅಮ್ಮವರು ಹಾಗೆ ಹೇಳಿಲ್ಲ ನನ್ನದೇ ತಪ್ಪು ಎನ್ನುವ ಹೇಳಿಕೆ ನೀಡಲೂಬಹುದು. ಆದ್ರೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ..?
ಜನ ಸಾಮಾನ್ಯರಾದ ನಾವುಗಳು ವಿಚಾರ ಮಾಡುವುದು ಬಹಳಷ್ಟಿದೆ ನನ್ನದು ಆ ಪಕ್ಷ ನನ್ನದು ಈ ಪಕ್ಷ ಅಂತ ಕಿತ್ತಾಡ್ತಾ ಇರುತ್ತೇವೆ ಹೊರತು ಇಂಥ ವಿಚಾರಗಳನ್ನು ಧೈರ್ಯವಾಗಿ ಖಂಡಿಸುವುದು ಇಲ್ಲ, ಇಂಥವರ ವಿರುದ್ಧ ಯೋಗ್ಯರನ್ನು ಆಯ್ಕೆ ಮಾಡುವುದು ಇಲ್ಲ ಎಂದು ಬರೆದುಕೊಂಡಿದ್ದಾರೆ.

https://m.facebook.com/story.php?story_fbid=pfbid02rriCzFnZ2TUQAuPfb2SFTJTDp5eRCP1rWV5UkDqhT5ZGtdcAuFLjAgUKZUVuDq8vl&id=100011214451587&mibextid=RtaFA8

 

https://m.facebook.com/story.php?story_fbid=pfbid021eiv9wJDwgYiK5PwRB9p6J3UPsC5DNpE23wf3dW2Xmsh58yPgMVbU2nKpCL2vUF9l&id=100002096847608&mibextid=RtaFA8

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...