Homeಕರ್ನಾಟಕಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

- Advertisement -
- Advertisement -

ಶಾಸಕ ಹೆಚ್‌ಡಿ ರೇವಣ್ಣ ಅವರ ಪತ್ನಿ, ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಸಾಲಿಗ್ರಾಮದ ಬಳಿ ಬೈಕೊಂದು ಢಿಕ್ಕಿ ಹೊಡೆದಿದೆ. ಘಟನೆ ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದು, ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ಕಾರಿಗೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಶಿವಣ್ಣ ಎಂಬಾತನ ಬೈಕ್‌ ಢಿಕ್ಕಿ ಹೊಡೆದಿದೆ. ಘಟನೆ ಆಕಸ್ಮಿಕವಾಗಿದೆ ಆದರೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಅವಾಚ್ಯವಾಗಿ ನಿಂದಿಸಿದ್ದಾರೆ.

ಬೋರ್ಡ್‌ ಎಲ್ಲಾ ಸಖತ್ ಡ್ಯಾಮೇಜ್‌ ಆಗಿದೆ, ಎಲ್ಲಿಗೆ ನುಗ್ಗಿಸ್ತೀಯಾ ಸುಟ್ಟ ಹಾಕ್ರೋ…. ಈ ಗಾಡಿ ಎಷ್ಟು ಡ್ಯಾಮೇಜ್‌ ಆಗಿದೆ, ಹೆಂಗೆ ರೆಡಿ ಮಾಡ್ಸೋದು? ಎಲ್ಲಾ ಹೋಗಿದೆ, ನೀನ್ ಫೋನ್ ತಗೋಬೇಡ, ನಡಿ ಆಚೆಗೆ ಯಾವನು ಸೀಝ್ ಮಾಡಿ ಗಾಡಿ. ಅವನಿಗೆ ಬೈಕ್ ಮುಟ್ಟಬೇಡ ಅಂತ ಹೇಳು. ಸಾಲಿಗ್ರಾಮ ಎಸ್‌ಐ ಬರಲು ಹೇಳು. ಒಂದುವರೆ ಕೋಟಿ ರೂಪಾಯಿ ಗಾಡಿ ಅದು, ಅದನ್ನು ಡ್ಯಾಮೇಜ್ ಮಾಡಿ ಬಿಟ್ಟಿದ್ದಾನೆ. ಏನ್ ಅರ್ಜೆಂಟ್ ಇತ್ತು? ಏನ್ ದೇಶ ಮುಳುಗಿ ಹೋಗಿತ್ತಾ ಎಂದೆಲ್ಲಾ ಹಿಗ್ಗಾ ಮುಗ್ಗ ನಿಂದಿಸಿದ್ದಾರೆ.

ಈ ವೇಳೆ ಅಕ್ಕ ಗಾಡಿ ತೆಗೀರಿ, ಹೋಗೋಣ ಎಂದು ಸ್ಥಳದಲ್ಲಿ ಇದ್ದವರು ಹೇಳಿದ್ದು, ಅದಕ್ಕೆ ಗಾಡಿ ತಗಂಡು ಏನ್ ಮಾಡೋಣ? ಕೊಡ್ತಿಯಾ 50 ಲಕ್ಷ ರಿಪೇರಿ ಮಾಡ್ಲಿಕೆ ಎಂದು ಅವರನ್ನೇ ಪ್ರಶ್ನಿಸಿದ್ದಾರೆ. ನಿಂತಿದ್ದವರು ದುಡ್ಡು ಕೊಡುವ ಹಾಗಿದ್ದರೆ ನ್ಯಾಯ ಮಾತನಾಡಲು ಬನ್ನಿ ಎಂದು ಬೈದಾಡಿದ್ದಾರೆ.

ಒಂದುವರೆ ಕೋಟಿ ರೂಪಾಯಿ ಗಾಡಿ, ಬೋರ್ಡ್ ಎಲ್ಲಾ ಏನು ಇಲ್ಲ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್‌ಗೆ ಸಿಗಾಕಂಡು, ನನ್ನ ಕಾರು ಡ್ಯಾಮೇಜ್ ಮಾಡಕೆ ನೀನ್ ಯಾವನು? ಒಂದುವರೆ ಕೋಟಿ ರೂಪಾಯಿ ಡ್ಯಾಮೇಜ್ ಯಾವನ್ ಕಟ್ಟೋನು? ಎಂದು ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ನಿಂದಿಸಿದ್ದಾರೆ.

ಬೈಕ್ ಸವಾರನ ವಿರುದ್ಧ ದೂರು

ಭವಾನಿ ರೇವಣ್ಣ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ದೂರು ದಾಖಲಾಗಿದೆ. ಬೈಕ್ ಸವಾರ ಶಿವಣ್ಣ ಎಂಬಾತನ ಮೇಲೆ ಭವಾನಿ ಕಾರು ಚಾಲಕ ಮಂಜುನಾಥ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬೈಕ್ ಸವಾರನ ಮೇಲೆ ಸಿಆರ್‌ಪಿಸಿ ಸೆಕ್ಷನ್ 157 ರಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಭವಾನಿ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಭವಾನಿ ರೇವಣ್ಣ ಬೈಕ್‌ ಚಾಲಕನಿಗೆ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಬಳಕೆದಾರರು ಭವಾನಿ ರೇವಣ್ಣ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕ ಬೈಕ್‌ ಸವಾರನ ಆರೋಗ್ಯ ವಿಚಾರಿಸದೆ ಭವಾನಿ ತಮ್ಮ ಕಾರಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ದುರಹಂಕಾರ ಎಂದು  ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದು, ಆಕಸ್ಮಿಕವಾಗಿ ನಡೆಯುವ ಘಟನೆಗೆ ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ವಾಹನಕ್ಕೆ ವಿಮೆ ಕ್ಲೈಮ್‌ ಮಾಡಬಹುದು. ಬೈಕ್‌ ಸವಾರನ ಪ್ರಾಣಕ್ಕೆ ಏನಾದರೂ ಆದರೆ ಯಾರು ಹೊಣೆ? ಅಹಂಕಾರದ ಮಾತುಗಳನ್ನು ಸ್ವಲ್ಲ ಕಡಿಮೆ ಮಾಡಿ ಎಂದು ಬರೆದುಕೊಂಡಿದ್ದಾರೆ.

ಅವ್ಯಾಚ ಪದಗಳನ್ನು ಬಳಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಕೆಲವರು, ಬಡವ ಸತ್ರೂ ಇವರಿಗೆ ಚಿಂತೆ ಇಲ್ಲ. ಆದರೆ ಇವರ ಒಂದೂವರೆ ಕೋಟಿ ಕಾರಿಗೆ ಏನು ಆಗಬಾರದು, ದೊಡ್ಡ ಗೌಡರ ಮನೆಗೆ ದೊಡ್ಡತನ ನೋಡಿ,  ಅಕ್ಕೋ ಸಮಾಧಾನ ಮಾಡ್ಕೊಳಿ ಎಂದೆಲ್ಲಾ ನೆಟ್ಟಿಗರು ಬರೆದುಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ರಾ.ಚಿಂತನ್‌, ಸಾಲಿಗ್ರಾಮದ ಬಳಿ ಬಡ ಬೈಕ್ ಸವಾರ ತಮ್ಮ ಕಾರಿಗೆ ಆಕಸ್ಮಿಕವಾಗಿ ಗುದ್ದಿದ್ದಕ್ಕೆ ಭವಾನಿ ರೇವಣ್ಣ ಅವರ ಪ್ರತಿಕ್ರಿಯೆ ಇದು. ಬಡವ ನೀನು ಬೇಕಾದ್ರೆ ಸಾಯಿ, ನನ್ನ ಕಾರು ಡ್ಯಾಮೇಜ್ ಆಗಿದ್ದು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಿದ ಇವರು ರೈತ ನಾಯಕ, ಮಣ್ಣಿನ ಮಗ ದೇವೇಗೌಡರ ಸೊಸೆ. ಶಾಸಕ ರೇವಣ್ಣ ಅವರ ಪತ್ನಿ, ಸಂಸದ ಪ್ರಜ್ವಲ್ ಅವರ ತಾಯಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅತ್ತಿಗೆ!

ಅಂದಹಾಗೆ, ಈ ದುಬಾರಿ ಕಾರಿನ ಸ್ಕ್ರಾಚ್ ರಿಪೇರಿಗೆ ಒಂದೆರಡು ಲಕ್ಷ ಖರ್ಚುಗಬಹುದೇನೋ… ಆ ಹಣ ಗೌಡರ ಕುಟುಂಬಕ್ಕೆ ಒಂದು ದಿನದ ಟೀ ಖರ್ಚಿಗಿಂತ ಕಡಿಮೆ. ಆದರೆ ಆ ಬಡ ರೈತ ತನ್ನ ಬೈಕ್ ರಿಪೇರಿ ಮಾಡಿಸಲು ಸಾಲ ಮಾಡಬೇಕು. ಅವನು ಸತ್ತಿದ್ದರೆ ಕುಟುಂಬ ಬೀದಿಗೆ ಬೀಳಬೇಕಿತ್ತು!

“ಬಡವ ನೀನು ಸತ್ತರೆ ಸಾಯಿ, ನನ್ನ ಕಾರು ನನಗೆ ಮುಖ್ಯ…” ಎಂಬ ಅಮೂಲ್ಯವಾದ ಸಂದೇಶ ಸಾರಿದ… ಭವಾನಿ ರೇವಣ್ಣ ಅವ್ರೇ.. So beautiful, so elegant, just looking like a wow’

ಅದೆಲ್ಲಾ ಇರ್ಲಿ… ನಿಮ್ಮ ಕಾರಿಗೆ ನಂಬರ್ ಪ್ಲೇಟ್ ಯಾಕಿಲ್ಲ ಮೇಡಂ? tinted glass ಬೇರೆ Heavy Dark ಇದೆ! ಅಲ್ಲಿಗೆ ಬಂದ ಪೊಲೀಸರು ಕೇಸ್ ಏನಾದ್ರೂ ಹಾಕಿದ್ರಾ? ಇಲ್ವಾ? ಎಂದು ಪೋಸ್ಟ್‌ ಮಾಡಿದ್ದಾರೆ.

ಇನ್ನೋರ್ವ ಫೇಸ್ಬುಕ್‌ ಬಳಕೆದಾರರಾದ ಮಂಜುನಾಥ ಗೌಡ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಬಡವ ಬೇಕಿದ್ದರೆ ಸತ್ತರೆ ಸಾಯಬಹುದು ಆದರೆ ಭವಾನಿ ರೇವಣ್ಣ ಅವರ ಒಂದೂವರೆ ಕೋಟಿಯ ಕಾರಿಗೆ ಮಾತ್ರ ಯಾವುದೇ ಡ್ಯಾಮೇಜ್ ಆಗಬಾರದು ಅಷ್ಟೇ….

ಬಡವರ ಬಗ್ಗೆ ಉದ್ದುದ್ದ ಬೊಗಳೆ ಬಿಡುವ H D Kumaraswamy ಅವರು ತಮ್ಮ ಅತ್ತಿಗೆಯವರ ಈ ಮುತ್ತಿನಂಥ ಮಾತುಗಳ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ದಿನೇಶ್‌ ದೊಡ್ಡಮನೆ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಒಂದೂವರೆ ಕೋಟಿ ಕಾರು, ಮೈ ತುಂಬಾ ಬಂಗಾರ, ಹತ್ತು ತಲೆ ಮಾರು ಕೂತು ತಿಂದರೂ ಕರಗದ ಆಸ್ತಿ, ಮಾವ ಮಾಜಿ ಪ್ರಧಾನಿ, ಮೈದುನ ಮಾಜಿ ಸಿಎಂ, ಗಂಡ ಮಾಜಿ ಸಚಿವ, ನಾದಿನಿ ಮಾಜಿ ಶಾಸಕಿ, ಒಬ್ಬ ಮಗ ಎಂಪಿ, ಇನ್ನೊಬ್ಬ ಮಗ ಎಂಎಲ್ಸಿ, ಇನ್ನೂ ನೀವು ಜಿಪಂ ಮಾಜಿ ಅಧ್ಯಕ್ಷರು ಇಷ್ಟೆಲ್ಲಾ ಇರುವ ನಿಮಗೆ ಅಹಂಕಾರ, ದುರಹಂಕಾರ ಸರ್ವೇ ಸಾಮಾನ್ಯ ಬಿಡಿ…
ಒಬ್ಬ ವ್ಯಕ್ತಿಯ ಜೀವಕ್ಕಿಂತ ನಿನ್ನ ಒಂದೂವರೆ ಕೋಟಿ ಕಾರಿನ 150 ರೂಪಾಯಿ ನಂಬರ್ ಪ್ಲೇಟ್ ಹೆಚ್ಚಾಯಿತಲ್ಲ ತಾಯಿ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್ಸಿಗೆ ಏನಾದ್ರೂ ಸಿಕ್ಕಾಕೊಂಡು, ನನ್ನ ಕಾರ್ ಬೇಕಿತ್ತಾ, ನನ್ನ 1.5 ಕೋಟಿ ರೂಪಾಯಿ ಕಾರಿನ ನಂಬರ್ ಪ್ಲೇಟ್ ಹಾಳು ಮಾಡಿ ಬಿಟ್ಟಲ್ಲ,  ಇದು ದರ್ಪದ, ದುರಹಂಕಾರದ ಮಾತು ಮಾತ್ರವಲ್ಲ ಶ್ರೀಮಂತಿಕೆಯ ಮದ ಕೂಡ ತಲೆಗೆ ಹತ್ತಿದೆ ಎಂದರೆ ತಪ್ಪಾಗಲಾರದು, ಬಡವರನ್ನು ಜನ ಸಾಮಾನ್ಯರನ್ನು ನೀವುಗಳು ಕಾಣುವ ಪರಿ ಇದು. ನಿಮ್ಮಂತವರನ್ನು ನೋಡ್ತಾ ಇದ್ರೆ ಫ್ರಾನ್ಸಿನ ಲೂಯಿ ದೊರೆಗಳು ನೆನಪಾಗಗಾದೇ ಇರರು. ಬಹುಶಃ ಅಪಘಾತದಲ್ಲಿ ಭಾಗಿಯಾದ ವ್ಯಕ್ತಿ ಕೂಡ ಆಕೆಯ ಹಿಂಬಾಲಕ ಆಗಿದ್ದರು ಆಗಿರಬಹುದು ಮತ್ತೆ ಚುನಾವಣೆ ಬಂದಾಗ ಅದೇ ವ್ಯಕ್ತಿಗೆ ಇಂದಿನ ಅವಮಾನ ಮರೆತು ವೋಟ್ ಹಾಕುವುದರಲ್ಲಿ ಅನುಮಾನ ಕೂಡ ಇಲ್ಲ ಅಥವಾ ನಾಳೆ ಮಾದ್ಯಮದ ಮುಂದೆ ಅಮ್ಮವರು ಹಾಗೆ ಹೇಳಿಲ್ಲ ನನ್ನದೇ ತಪ್ಪು ಎನ್ನುವ ಹೇಳಿಕೆ ನೀಡಲೂಬಹುದು. ಆದ್ರೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ..?
ಜನ ಸಾಮಾನ್ಯರಾದ ನಾವುಗಳು ವಿಚಾರ ಮಾಡುವುದು ಬಹಳಷ್ಟಿದೆ ನನ್ನದು ಆ ಪಕ್ಷ ನನ್ನದು ಈ ಪಕ್ಷ ಅಂತ ಕಿತ್ತಾಡ್ತಾ ಇರುತ್ತೇವೆ ಹೊರತು ಇಂಥ ವಿಚಾರಗಳನ್ನು ಧೈರ್ಯವಾಗಿ ಖಂಡಿಸುವುದು ಇಲ್ಲ, ಇಂಥವರ ವಿರುದ್ಧ ಯೋಗ್ಯರನ್ನು ಆಯ್ಕೆ ಮಾಡುವುದು ಇಲ್ಲ ಎಂದು ಬರೆದುಕೊಂಡಿದ್ದಾರೆ.

https://m.facebook.com/story.php?story_fbid=pfbid02rriCzFnZ2TUQAuPfb2SFTJTDp5eRCP1rWV5UkDqhT5ZGtdcAuFLjAgUKZUVuDq8vl&id=100011214451587&mibextid=RtaFA8

 

https://m.facebook.com/story.php?story_fbid=pfbid021eiv9wJDwgYiK5PwRB9p6J3UPsC5DNpE23wf3dW2Xmsh58yPgMVbU2nKpCL2vUF9l&id=100002096847608&mibextid=RtaFA8

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...