Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....