Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...