Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...