Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...