Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...