Homeಕರ್ನಾಟಕಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಸೊಗಡು, ಸುರೇಶ್ ಗೌಡ ಜೋಡಿಗೆ ಗೆಲುವು; ಟೂಡಾ ಅಧ್ಯಕ್ಷ ಸ್ಥಾನಕ್ಕೆ ಬಾವಿಕಟ್ಟೆ ನಾಗಣ್ಣ ನೇಮಕ!

ಟೂಡಾ ಅಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

- Advertisement -
- Advertisement -

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ)ಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬಾಮೈದ ಬಾವಿಕಟ್ಟೆ ನಾಗಣ್ಣ ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಮತ್ತು ಎಸ್. ಶಿವಣ್ಣ ಜೊತೆಯಾಗಿ ತಮ್ಮ ಬಣದ ವ್ಯಕ್ತಿಯನ್ನೇ ಟೂಡಾ ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂಬ ಒತ್ತಾಸೆ ಈಡೇರಿದಂತಾಗಿದೆ.

ಈ ಮೂಲಕ ‘ಬಸವಜ್ಯೊತಿ’ ಪ್ರಾಬಲ್ಯ ಕುಸಿಯುವಂತೆ ಮಾಡಲಾಗಿದೆ. ಟೂಡಾಧ್ಯಕ್ಷರ ನೇಮಕದಲ್ಲಿ ಮೂಲ ಬಿಜೆಪಿಗರೇ ಮೇಲುಗೈ ಆಗಿದ್ದು ವಲಸಿಗರಿಗೆ ಮುಖ ಭಂಗವಾದಂತಾಗಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಹಿಂದೆ ಶಾಸಕ ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾಗ ಹಲವು ಹುದ್ದೆಗಳಿಗೆ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡಿದ್ದರು. ‘ಬಸವಜ್ಯೋತಿ’ಗೆ ಆಪ್ತರಾಗಿದ್ದವರನ್ನು ಮಾತ್ರ ಪದಾಧಿಕಾರಿಗಳ ಹುದ್ದೆಗೆ ನೇಮಕ ಮಾಡಿ ಆಗ ಮೇಲುಗೈ ಸಾಧಿಸಿದ್ದರು. ಅಧ್ಯಕ್ಷರ ನಡೆ ಮೂಲ ಬಿಜೆಪಿ ಮತ್ತು ವಲಸಿಗ ಬಿಜೆಪಿ ಎಂದು ಎರಡು ಗುಂಪುಗಳು ಹುಟ್ಟಿಕೊಂಡಿದ್ದವು. ಮಾಜಿ ಸಚಿವ ಸೊಗಡು ಶಿವಣ್ಣ ಪತ್ರಿಕಾಗೋಷ್ಠಿ ನಡೆಸಿ ‘ಅಪ್ಪಮಗ’ನ ವಿರುದ್ಧ ಟೀಕೆ-ಆಕ್ರೋಶ ವ್ಯಕ್ತಪಡಿಸಿದ್ದರು. ಬಣ ರಾಜಕೀಯಕ್ಕೆ ನಾಂದಿಯಾಗಿ ಆನಂತರ ತಣ್ಣಗಾಗಿತ್ತು.

‘ಅಪ್ಪಮಗನ’ ಆಟಕ್ಕೆ ಅಂತ್ಯ ಹಾಡಬೇಕು. ವಲಸಿಗರಿಗೇ ಮಣ ಹಾಕಲಾಗಿದೆ. ಮೂಲ ಬಿಜೆಪಿಗರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು ಸೊಗಡು ಶಿವಣ್ಣ. ಈ ಹಿನ್ನೆಲೆಯಲ್ಲಿ ಸೊಗಡು ಮನೆಗೆ ಕೆ.ಎಸ್. ಈಶ್ವರಪ್ಪ ಬಂದು ಪಕ್ಷದ ಹುದ್ದೆಗೆಳ ನೇಮಕದಲ್ಲಿ ಆಗಿರುವ ಲೋಪ ಸರಿಪಡಿಸುವ ಭರವಸೆ ನೀಡಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಶಕ ಬಿ.ಸುರೇಶ್ ಗೌಡ ಜೊತೆ ಹೆಚ್ಚು ಆಪ್ತತೆ ಬೆಳೆಸಿಕೊಂಡರು.

ಈಗ ಮತ್ತೆ ಬಿ.ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ ಏರುತ್ತಿದ್ದಂತೆ ‘ಅಪ್ಪಮಗ ‘ಬಸವಜ್ಯೋತಿ’ ಆಟಕ್ಕೆ ಕಡಿವಾಣ ಹಾಕಲು ತೆರೆಮರೆಯಲ್ಲೇ ತಂತ್ರ ಹೆಣೆದು ಇದೀಗ ಯಶ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಮೂಲಕ ಅಪ್ಪಮಗನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದ್ದಾರೆ. ಸೊಗಡು ಶಿವಣ್ಣ ಮತ್ತು ಬಿ.ಸುರೇಶ್ ಗೌಡ ಉರುಳಿಸುತ್ತಿರುವ ದಾಳಕ್ಕೆ ‘ಬಸವಜ್ಯೋತಿ’ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾಣೆಯ ಬಿಸಿಯಲ್ಲಿ ಇರುವಾಗಲೇ ಮೂಲ ಬಿಜೆಪಿ ನೆಲಗಳು ಗಟ್ಟಿಗೊಳ್ಳತೊಡಗಿವೆ.

ಇದನ್ನೂ ಓದಿ: 1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ತುಮಕೂರು ಜಿಲ್ಲೆಯ ಮಟ್ಟಿಗೆ ಟೂಡಾ ಅಧ್ಯಕ್ಷರ ನೇಮಕ ‘ಬಸವಜ್ಯೋತಿ’ಗೆ ಮುಖಭಂಗವಾಗಿದೆ. ತಮ್ಮ ಬಣದವರನ್ನು ತರಬೇಕೆಂಬ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಆದರೆ ಟೂಡಾಧ್ಯಕ್ಷರಾಗಿ ತಾನೇ ನೇಮಕಗೊಳ್ಳುತ್ತೇನೆ ಎಂದು ಬೈಕ್ ಬಿಟ್ಟು ಸ್ನೇಹಿತರ ಕಾರಿನಲ್ಲಿ ಓಡುತ್ತಿದ್ದವರಿಗೆ ಇರಿಸುಮುರುಸಾಗಿದೆ. ತಮ್ಮ ಬಾಂಧವರ ಹೋಟೆಲ್‌ಗಳಿಗೆ ಹೋಗಿ ನೆರವು ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದ ಬಿಜೆಪಿ ಬೆಂಬಲಿಗನಿಗೆ ಬಾವಿಕಟ್ಟೆ ನಾಗಣ್ಣ ಅವರ ನೇಮಕ ಕಿರಿಕಿರಿ ಉಂಟುಮಾಡಿದೆ.

‘ಬಸವಜ್ಯೋತಿ’ ಬೆಳಕು ಮಸುಕಾಗಿದೆ. ಸೊಗಡು ಹೆಚ್ಚಾಗಿದೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಟೂಡಾ ಅಧ್ಯಕ್ಷರು ಹೀಗೆ ಎಲ್ಲಾ ಪ್ರಮುಖ ಹುದ್ದೆಗಳಿಗೂ ಒಂದೇ ಸಮುದಾಯದವರನ್ನು ತಂದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

~ಕೆ.ಇ. ಸಿದ್ದಯ್ಯ


ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...