Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹೇಳಿಕೆಯನ್ನು 500 ಕ್ಕೂ ಹೆಚ್ಚು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣತಜ್ಞರು ಬೆಂಬಲಿಸಿದ್ದಾರೆ. ”ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ” ಎಂಬ ನೆಪವು ಸಮಂಜಸವಲ್ಲ ಎಂದು ಹೇಳಿದ್ದಾರೆ.

ಭಾರತ: ಮೋದಿ ಪ್ರಶ್ನೆ ಎಂಬ ಶೀರ್ಷಿಕೆಯ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುರ್ಕಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾನಿಲಯ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ತೆಗೆದುಕೊಂಡ ನಿರ್ಧಾರಗಳನ್ನು ಅವರು ಟೀಕಿಸಿದರು. ”ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ” ಎಂದು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸ್ವತಂತ್ರ ಸಂಸ್ಥೆ: ಸಾಕ್ಷ್ಯಚಿತ್ರದ ವಿರುದ್ಧದ ಟೀಕೆಗಳಿಗೆ ರಿಷಿ ಸುನಕ್ ವಕ್ತಾರ ಪ್ರತಿಕ್ರಿಯೆ

ಸಂಪೂರ್ಣ ಹೇಳಿಕೆ ಮತ್ತು ಸಹಿ ಮಾಡಿದವರ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

BBC ಸಾಕ್ಷ್ಯಚಿತ್ರ “ಇಂಡಿಯಾ: ಮೋದಿ ಪ್ರಶ್ನೆ” ಸೆನ್ಸಾರ್ಶಿಪ್ ಕುರಿತು ಹೇಳಿಕೆ

ನಾವು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರ ಗುಂಪು.

“ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್‌ಶಿಪ್‌ನಲ್ಲಿ ತಂದಿರುವುದನ್ನು ಕಂಡು ನಾವು ದಿಗ್ಭ್ರಮೆಗೊಂಡಿದ್ದೇವೆ. ಈ ಸಾಕ್ಷ್ಯಚಿತ್ರ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ ಎಂಬ ನೆಪದಲ್ಲಿ ಭಾರತ ಸರ್ಕಾರವು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಿದೆ. ಈ ಸಮರ್ಥನೆಯು ಒಪ್ಪವಂತಹದ್ದಲ್ಲ. ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ.

ದೇಶದಾದ್ಯಂತ ವಿಶ್ವವಿದ್ಯಾಲಯದ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ಪ್ರಯತ್ನಿಸಿದವು. ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ.

BBC ಸಾಕ್ಷ್ಯಚಿತ್ರವು ಯಾವುದೇ ಮೂಲಭೂತವಾಗಿ ಹೊಸ ಅಂಶಗಳನ್ನು ಎತ್ತುವುದಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ಈಗಾಗಲೇ, 2002 ರಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗೋಧ್ರಾ ದುರಂತದಿಂದ ಪ್ರಾರಂಭಿಸಿ ಮತ್ತು ನಂತರದ ಹಿಂಸಾಚಾರದವರೆಗೆ ಮುಂದುವರಿದಿದ್ದನ್ನು ನೋಡಿ, “ಗುಜರಾತಿನ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವಲ್ಲಿ ರಾಜ್ಯವು ಸಮಗ್ರವಾಗಿ ವಿಫಲವಾಗಿದೆ ಎಂದು ಖಚಿತವಾದ ತೀರ್ಮಾನಕ್ಕೆ ಬಂದಿತ್ತು. ನಂತರದ ವಾರಗಳಲ್ಲಿ, ಹಲವಾರು ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ.

ಇದರ ಹೊರತಾಗಿಯೂ, 2002 ರಲ್ಲಿ ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ಉತ್ತೇಜಿಸಲು ಮತ್ತು ಸಕ್ರಿಯಗೊಳಿಸಲು ಕಾರಣಕರ್ತರಾದವರನ್ನು ಗುರುತಿಸಲಾಗಿಲ್ಲ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಮಾತ್ರವಲ್ಲದೇ, ಇಂದು ದೇಶವನ್ನು ಛಿದ್ರಗೊಳಿಸುವ ಬೆದರಿಕೆಯೊಡ್ಡುತ್ತಿರುವ ಕೋಮು ಧ್ರುವೀಕರಣವನ್ನು ಹಿಮ್ಮೆಟ್ಟಿಸಲು ಇದರ ಹೊಣೆಗಾರಿಕೆಯು ನಿರ್ಣಾಯಕವಾಗಲಿದೆ. ಆದ್ದರಿಂದ, ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಎತ್ತಿರುವ ಪ್ರಶ್ನೆಗಳು ಮುಖ್ಯವಾಗಿವೆ. ಚಲನಚಿತ್ರವನ್ನು ಬ್ಯಾನ್ ಮಾಡುವುದರಿಂದ ಈ ಹಿಂಸಾಚಾರದ ಸಂತ್ರಸ್ತರ ಧ್ವನಿಯನ್ನು ಮತ್ತಷ್ಟು ಮೌನಗೊಳಿಸಿದಂತಾಗಬಹುದು.

ಭಾರತದಲ್ಲಿನ ಸೆನ್ಸಾರ್‌ಶಿಪ್‌ನ ನಮ್ಮ ಟೀಕೆಯನ್ನು BBC ಅಥವಾ ಬ್ರಿಟಿಷ್ ಸ್ಥಾಪನೆಯ ಅನುಮೋದನೆ ಎಂದು ವ್ಯಾಖ್ಯಾನಿಸಬಾರದು ಎಂದು ಹೇಳಬೇಕಾಗಿಲ್ಲ. ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳುವ ಜಾಕ್ ಸ್ಟ್ರಾ ಅವರು ಟೋನಿ ಬ್ಲೇರ್ ಅವರ ಸಂಪುಟದಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು ಎಂದು ನಮಗೆ ತಿಳಿದಿದೆ. ಈ ಪಾತ್ರದಲ್ಲಿ, “ಇರಾಕಿನ ಸಾಮೂಹಿಕ ವಿನಾಶದ ಆಯುಧಗಳ” ಬಗ್ಗೆ ಸುಳ್ಳುಸುದ್ದಿಗಳನ್ನು ಹರಡಲು ಅವರು ಜವಾಬ್ದಾರರಾಗಿದ್ದರು, ಇದನ್ನು ಬಿಬಿಸಿ ಯಥಾವತ್ತಾಗಿ ಪುನರಾವರ್ತಿಸಿತು ಮತ್ತು ನೂರಾರು ಸಾವಿರ ಮುಗ್ಧ ಜನರ ಸಾವಿಗೆ ಕಾರಣವಾದ ಇರಾಕ್‌ನ ಆಂಗ್ಲೋ-ಅಮೇರಿಕನ್ ಆಕ್ರಮಣವನ್ನು ಸಮರ್ಥಿಸಲು ಬಳಸಲಾಯಿತು..

ಭಾರತೀಯ ವಿದ್ವಾಂಸರು ಮತ್ತು ಕಾರ್ಯಕರ್ತರು, ಬೃಹತ್ ಮತ್ತು ವಿಶ್ವಾಸಾರ್ಹ ವಿಷಯದೊಂದಿಗೆ ನಿರ್ಮಿಸಿರುವ BBC ಸಾಕ್ಷ್ಯಚಿತ್ರವನ್ನು ಬೆಂಬಲಿಸುತ್ತೇವೆ ಮತ್ತು ವೀಕ್ಷಕರನ್ನು ಪ್ರೋತ್ಸಾಹಿಸುತ್ತೇವೆ. 2002 ರ ಭಯಾನಕ ಘಟನೆಗಳು ಮತ್ತು ಇಂದು ದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಭಯಾನಕ ಪರಿಸ್ಥಿತಿ ಎರಡನ್ನೂ ಇದು ದಾಖಲಿಸುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...