Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹೇಳಿಕೆಯನ್ನು 500 ಕ್ಕೂ ಹೆಚ್ಚು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣತಜ್ಞರು ಬೆಂಬಲಿಸಿದ್ದಾರೆ. ”ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ” ಎಂಬ ನೆಪವು ಸಮಂಜಸವಲ್ಲ ಎಂದು ಹೇಳಿದ್ದಾರೆ.

ಭಾರತ: ಮೋದಿ ಪ್ರಶ್ನೆ ಎಂಬ ಶೀರ್ಷಿಕೆಯ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುರ್ಕಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾನಿಲಯ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ತೆಗೆದುಕೊಂಡ ನಿರ್ಧಾರಗಳನ್ನು ಅವರು ಟೀಕಿಸಿದರು. ”ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ” ಎಂದು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸ್ವತಂತ್ರ ಸಂಸ್ಥೆ: ಸಾಕ್ಷ್ಯಚಿತ್ರದ ವಿರುದ್ಧದ ಟೀಕೆಗಳಿಗೆ ರಿಷಿ ಸುನಕ್ ವಕ್ತಾರ ಪ್ರತಿಕ್ರಿಯೆ

ಸಂಪೂರ್ಣ ಹೇಳಿಕೆ ಮತ್ತು ಸಹಿ ಮಾಡಿದವರ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

BBC ಸಾಕ್ಷ್ಯಚಿತ್ರ “ಇಂಡಿಯಾ: ಮೋದಿ ಪ್ರಶ್ನೆ” ಸೆನ್ಸಾರ್ಶಿಪ್ ಕುರಿತು ಹೇಳಿಕೆ

ನಾವು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರ ಗುಂಪು.

“ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್‌ಶಿಪ್‌ನಲ್ಲಿ ತಂದಿರುವುದನ್ನು ಕಂಡು ನಾವು ದಿಗ್ಭ್ರಮೆಗೊಂಡಿದ್ದೇವೆ. ಈ ಸಾಕ್ಷ್ಯಚಿತ್ರ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ ಎಂಬ ನೆಪದಲ್ಲಿ ಭಾರತ ಸರ್ಕಾರವು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಿದೆ. ಈ ಸಮರ್ಥನೆಯು ಒಪ್ಪವಂತಹದ್ದಲ್ಲ. ಸಾಕ್ಷ್ಯಚಿತ್ರವನ್ನು ತೆಗೆದುಹಾಕಿರುವುದು, ಸಮಾಜ ಮತ್ತು ಸರ್ಕಾರದ ಬಗ್ಗೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಲು ಮತ್ತು ಚರ್ಚಿಸಲು ಭಾರತೀಯ ನಾಗರಿಕರಿಗೆ ಸಾಧ್ಯವಾಗುವುದಿಲ್ಲ. ಇದು ನಾಗರಿಕರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ.

ದೇಶದಾದ್ಯಂತ ವಿಶ್ವವಿದ್ಯಾಲಯದ ಆಡಳಿತಗಳು ಸಾಕ್ಷ್ಯಚಿತ್ರದ ಪ್ರದರ್ಶನವನ್ನು ತಡೆಯಲು ಪ್ರಯತ್ನಿಸಿದವು. ಇದು ಶೈಕ್ಷಣಿಕ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತದೆ. ವಿಶ್ವವಿದ್ಯಾನಿಲಯಗಳು ಸಾಮಾಜಿಕ ಮತ್ತು ರಾಜಕೀಯ ಪ್ರಶ್ನೆಗಳ ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸಬೇಕು. ಪ್ರಜಾಸತ್ತಾತ್ಮಕ ಸಮಾಜದ ಸರಿಯಾದ ಕಾರ್ಯನಿರ್ವಹಣೆಗೆ ಇಂತಹ ಚರ್ಚೆಗಳು ನಿರ್ಣಾಯಕ. ವಿಶ್ವವಿದ್ಯಾನಿಲಯಗಳು ಸರ್ಕಾರವನ್ನು ಟೀಕಿಸುವ ಕಾರಣದಿಂದ ಕೆಲವು ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಸ್ವೀಕಾರಾರ್ಹವಲ್ಲ.

BBC ಸಾಕ್ಷ್ಯಚಿತ್ರವು ಯಾವುದೇ ಮೂಲಭೂತವಾಗಿ ಹೊಸ ಅಂಶಗಳನ್ನು ಎತ್ತುವುದಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ಈಗಾಗಲೇ, 2002 ರಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗೋಧ್ರಾ ದುರಂತದಿಂದ ಪ್ರಾರಂಭಿಸಿ ಮತ್ತು ನಂತರದ ಹಿಂಸಾಚಾರದವರೆಗೆ ಮುಂದುವರಿದಿದ್ದನ್ನು ನೋಡಿ, “ಗುಜರಾತಿನ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವಲ್ಲಿ ರಾಜ್ಯವು ಸಮಗ್ರವಾಗಿ ವಿಫಲವಾಗಿದೆ ಎಂದು ಖಚಿತವಾದ ತೀರ್ಮಾನಕ್ಕೆ ಬಂದಿತ್ತು. ನಂತರದ ವಾರಗಳಲ್ಲಿ, ಹಲವಾರು ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ.

ಇದರ ಹೊರತಾಗಿಯೂ, 2002 ರಲ್ಲಿ ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ಉತ್ತೇಜಿಸಲು ಮತ್ತು ಸಕ್ರಿಯಗೊಳಿಸಲು ಕಾರಣಕರ್ತರಾದವರನ್ನು ಗುರುತಿಸಲಾಗಿಲ್ಲ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಮಾತ್ರವಲ್ಲದೇ, ಇಂದು ದೇಶವನ್ನು ಛಿದ್ರಗೊಳಿಸುವ ಬೆದರಿಕೆಯೊಡ್ಡುತ್ತಿರುವ ಕೋಮು ಧ್ರುವೀಕರಣವನ್ನು ಹಿಮ್ಮೆಟ್ಟಿಸಲು ಇದರ ಹೊಣೆಗಾರಿಕೆಯು ನಿರ್ಣಾಯಕವಾಗಲಿದೆ. ಆದ್ದರಿಂದ, ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಎತ್ತಿರುವ ಪ್ರಶ್ನೆಗಳು ಮುಖ್ಯವಾಗಿವೆ. ಚಲನಚಿತ್ರವನ್ನು ಬ್ಯಾನ್ ಮಾಡುವುದರಿಂದ ಈ ಹಿಂಸಾಚಾರದ ಸಂತ್ರಸ್ತರ ಧ್ವನಿಯನ್ನು ಮತ್ತಷ್ಟು ಮೌನಗೊಳಿಸಿದಂತಾಗಬಹುದು.

ಭಾರತದಲ್ಲಿನ ಸೆನ್ಸಾರ್‌ಶಿಪ್‌ನ ನಮ್ಮ ಟೀಕೆಯನ್ನು BBC ಅಥವಾ ಬ್ರಿಟಿಷ್ ಸ್ಥಾಪನೆಯ ಅನುಮೋದನೆ ಎಂದು ವ್ಯಾಖ್ಯಾನಿಸಬಾರದು ಎಂದು ಹೇಳಬೇಕಾಗಿಲ್ಲ. ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳುವ ಜಾಕ್ ಸ್ಟ್ರಾ ಅವರು ಟೋನಿ ಬ್ಲೇರ್ ಅವರ ಸಂಪುಟದಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು ಎಂದು ನಮಗೆ ತಿಳಿದಿದೆ. ಈ ಪಾತ್ರದಲ್ಲಿ, “ಇರಾಕಿನ ಸಾಮೂಹಿಕ ವಿನಾಶದ ಆಯುಧಗಳ” ಬಗ್ಗೆ ಸುಳ್ಳುಸುದ್ದಿಗಳನ್ನು ಹರಡಲು ಅವರು ಜವಾಬ್ದಾರರಾಗಿದ್ದರು, ಇದನ್ನು ಬಿಬಿಸಿ ಯಥಾವತ್ತಾಗಿ ಪುನರಾವರ್ತಿಸಿತು ಮತ್ತು ನೂರಾರು ಸಾವಿರ ಮುಗ್ಧ ಜನರ ಸಾವಿಗೆ ಕಾರಣವಾದ ಇರಾಕ್‌ನ ಆಂಗ್ಲೋ-ಅಮೇರಿಕನ್ ಆಕ್ರಮಣವನ್ನು ಸಮರ್ಥಿಸಲು ಬಳಸಲಾಯಿತು..

ಭಾರತೀಯ ವಿದ್ವಾಂಸರು ಮತ್ತು ಕಾರ್ಯಕರ್ತರು, ಬೃಹತ್ ಮತ್ತು ವಿಶ್ವಾಸಾರ್ಹ ವಿಷಯದೊಂದಿಗೆ ನಿರ್ಮಿಸಿರುವ BBC ಸಾಕ್ಷ್ಯಚಿತ್ರವನ್ನು ಬೆಂಬಲಿಸುತ್ತೇವೆ ಮತ್ತು ವೀಕ್ಷಕರನ್ನು ಪ್ರೋತ್ಸಾಹಿಸುತ್ತೇವೆ. 2002 ರ ಭಯಾನಕ ಘಟನೆಗಳು ಮತ್ತು ಇಂದು ದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಭಯಾನಕ ಪರಿಸ್ಥಿತಿ ಎರಡನ್ನೂ ಇದು ದಾಖಲಿಸುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...