Homeಮುಖಪುಟಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರಕ್ಕೆ ಟ್ವಿಟರ್‌ನಲ್ಲಿ ನಿರ್ಬಂಧ

ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರಕ್ಕೆ ಟ್ವಿಟರ್‌ನಲ್ಲಿ ನಿರ್ಬಂಧ

- Advertisement -
- Advertisement -

2002ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಬಿಡುಗಡೆ ಮಾಡಿರುವ ಸಾಕ್ಷ್ಯಚಿತ್ರದ ಲಿಂಕ್‌ಅನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ನಿರ್ಬಂಧಿಸಿದೆ. “ನಾನು ಮಾಡಿರುವ ಪೋಸ್ಟ್ ಅನ್ನು ಕಾನೂನು ಬಾಧ್ಯತೆಗಳನ್ನು ಉಲ್ಲೇಖಿಸಿ ಟ್ವಿಟರ್ ಅಳಿಸಿ ಹಾಕಿದೆ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಶನಿವಾರ ಹೇಳಿದ್ದಾರೆ.

ಸಾಕ್ಷ್ಯಚಿತ್ರದ ಯೂಟ್ಯೂಬ್ ಲಿಂಕ್‌ನೊಂದಿಗೆ ಒ’ಬ್ರಿಯಾನ್ ಗುರುವಾರ ಟ್ವೀಟ್ ಮಾಡಿದ್ದರು. ‌“ಆಳವಾದ ಸಂಶೋಧನೆಯಿಂದ ಕೂಡಿದ ಈ ಸಾಕ್ಷ್ಯಾಚಿತ್ರ ನಮ್ಮನ್ನು ತಣ್ಣಗಾಗಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಪಸಂಖ್ಯಾತರ ಮೇಲೆ ಇರುವ ದ್ವೇಷವನ್ನು ಇದು ತೋರಿಸುತ್ತದೆ” ಎಂದು ಅವರು ಟ್ವೀಟ್‌ ಮಾಡಿದ್ದರು.

ಆದಾಗ್ಯೂ, ಟ್ವಿಟರ್ ಸಂಸ್ಥೆಯು, “ಭಾರತದಲ್ಲಿನ ಬಳಕೆದಾರರಿಗೆ ಪೋಸ್ಟ್ ಅನ್ನು ತಡೆಹಿಡಿದಿದೆ, ಕಾನೂನು ಬೇಡಿಕೆಯ ಪ್ರತಿಕ್ರಿಯೆಯಾಗಿ ಈ ಕ್ರಮ ಜರುಗಿಸಲಾಗಿದೆ” ಎಂದು ಹೇಳಿದೆ.

ಟಿಎಂಸಿ ಸಂಸದರಿಗೆ ಶನಿವಾರ ಟ್ವಿಟ್ಟರ್‌ನಿಂದ ಒಂದು ಇ-ಮೇಲ್ ಬಂದಿದೆ. “ಭಾರತದ ಸ್ಥಳೀಯ ಕಾನೂನುಗಳ ಬಾಧ್ಯತೆಗಳನ್ನು ಅನುಸರಿಸುವ ಸಲುವಾಗಿ ಭಾರತದಲ್ಲಿ ಟ್ವೀಟ್ ಅನ್ನು ತಡೆಹಿಡಿಯಲಾಗಿದೆ” ಎಂದು ಇಮೇಲ್ ಮೂಲಕ ತಿಳಿಸಿದೆ. ಪೋಸ್ಟ್ ದೇಶದ ಹೊರಗೆ ಲಭ್ಯವಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಇದು ಸೆನ್ಸಾರ್‌ಶಿಪ್‌ನ ನಿದರ್ಶನವಾಗಿದೆ ಎಂದು ಓ’ಬ್ರೇನ್ ಆರೋಪಿಸಿದ್ದಾರೆ. ಟ್ವಿಟರ್‌‌ ಉಲ್ಲೇಖಿಸಿದ ಕಾರಣವನ್ನು ದುರ್ಬಲ ಎಂದು ವಿವರಿಸಿದರು. “ಪ್ರತಿಪಕ್ಷಗಳು ಸರಿಯಾದ ಹೋರಾಟವನ್ನು ಮುಂದುವರೆಸುತ್ತವೆ” ಎಂದು ಎಚ್ಚರಿಸಿದ್ದಾರೆ.

ಜನವರಿ 17 ರಂದು, ‘ಭಾರತ: ಮೋದಿ ಪ್ರಶ್ನೆ’ ಸಾಕ್ಷ್ಯಾಚಿತ್ರದ ಎರಡು ಭಾಗಗಳ ಮೊದಲ ಸಂಚಿಕೆ ಬಿಡುಗಡೆಯಾಯಿತು.

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ. ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರ ಮಂಗಳವಾರ ಬಿಡುಗಡೆಯಾಗಿತ್ತು.

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಎಂಬ ಆರೋಪವನ್ನು ಮೋದಿ ಅಲ್ಲಗಳೆದಿದ್ದಾರೆ.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ತನ್ನ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ.

ಆದಾಗ್ಯೂ, ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು, ಅದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...