Homeಮುಖಪುಟಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

ಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಮತ್ತು ಹಿರಿಯ ವಕೀಲ ಡಾ. ಆದೀಶ್ ಸಿ ಅಗರ್‌ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಇತ್ತೀಚಿನ ಸಾಕ್ಷ್ಯಚಿತ್ರದಲ್ಲಿನ ಅಂತಾರಾಷ್ಟ್ರೀಯ ಪಿತೂರಿ ಕುರಿತು ಎಲ್ಲ ಆಯಾಮದಲ್ಲೂ (360 ಡಿಗ್ರಿ) ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವ ಸರ್ಕಾರದ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಎಐಬಿಎ ಅಧ್ಯಕ್ಷರು, “ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ನ್ಯಾಯಶಾಸ್ತ್ರಜ್ಞರು ಮತ್ತು ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಸಾಕ್ಷ್ಯಾಚಿತ್ರದ ವಿರುದ್ಧ ತನಿಖೆ ನಡೆಸಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸಾಕ್ಷ್ಯಚಿತ್ರದ ಹಿಂದೆ ಕಾಣದ ಕೈಗಳಿವೆ. ಅಪಖ್ಯಾತಿಗೊಳಗಾದ ಮತ್ತು ತಿರಸ್ಕರಿಸಲ್ಪಟ್ಟ ಸಾಕ್ಷಿಗಳೊಂದಿಗೆ ಕಾಲ್ಪನಿಕ ಕತೆಗಳನ್ನು ರೂಪಿಸಲು ಸೇರಿಕೊಂಡಿರುವ ಮನಸ್ಸುಗಳನ್ನು ಗುರುತಿಸಿ ತನಿಖೆ ಮಾಡಬೇಕು” ಎಂದು ಅಗರವಾಲಾ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸಾಕ್ಷ್ಯಚಿತ್ರ ಎಂದು ಕರೆಯಲ್ಪಡುವ ಇದು ಹೊಸ ವಿಚಾರಗಳನ್ನೇನೂ ಹೊಂದಿಲ್ಲ. ಅದರ ಹೆಚ್ಚಿನ ವಿಷಯಗಳನ್ನು ಸಾರ್ವಜನಿಕವಾಗಿ ಸಂಪೂರ್ಣವಾಗಿ ಪ್ರಕಟಿಸಲಾಗಿದೆ ಮತ್ತು ಚರ್ಚಿಸಲಾಗಿದೆ. ಭಾರತದ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಪರಿಗಣಿಸಿ, ಅವುಗಳನ್ನು ತಿರಸ್ಕರಿಸಿವೆ” ಎಂದು ತಿಳಿಸಿದ್ದಾರೆ.

“20 ವರ್ಷಗಳ ಹಿಂದಿನ ಗುಜರಾತ್ ಗಲಭೆಯು ಹಲವಾರು ಪದರಗಳನ್ನು ಹೊಂದಿದೆ. ಆದರೆ ಈ ಬಿಬಿಸಿ ಸಾಕ್ಷ್ಯಾಚಿತ್ರವು ಏಕಮುಖವಾಗಿದೆ. ಸಾಕಷ್ಟು ದುರುದ್ದೇಶಪೂರಿತವಾಗಿದೆ. ನಮ್ಮ ಪ್ರಧಾನಮಂತ್ರಿ ಮತ್ತು ರಾಷ್ಟ್ರ ಟೀಕೆ ಎದುರಿಸುವಂತಾಗಿದೆ” ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ತನಿಖೆಯ ಜೊತೆಗೆ, ಈ ಸಾಕ್ಷ್ಯಾಚಿತ್ರ ನಿರ್ಮಾಣವಾಗಲು ಕಾರಣವಾದ ಜನರನ್ನು ಗುರುತಿಸಬೇಕು, ಅವರ ಹಿನ್ನೆಲೆಯನ್ನು ತನಿಖೆ ಮಾಡಬೇಕು, ಬಿಬಿಸಿ ಮತ್ತು ಅದರ ಹಿಡಿತದಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಬೇಕು, ಭಾರತ ಸರ್ಕಾರದೊಂದಿಗೆ ಇನ್ನಷ್ಟು ಸಹಕರಿಸಲು ಯುಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಪತ್ರದಲ್ಲಿ ಎಐಬಿಎ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಭಾನುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, “ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡುವಾಗ ಕೆಲವರು ಸುಪ್ರೀಂಕೋರ್ಟ್‌ಗಿಂತ ಬಿಬಿಸಿಯನ್ನು ಹೆಚ್ಚು ಪರಿಗಣಿಸುತ್ತಾರೆ” ಎಂದು ಆರೋಪಿಸಿದ್ದರು.

ವೆಬ್‌ಸೈಟ್‌ನಲ್ಲಿ ಡಾಕ್ಯುಮೆಂಟರಿ ಪ್ರಕಟಿಸಿದ ಬಿಬಿಸಿ

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಇದನ್ನೂ ಓದಿರಿ: ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...